RSS ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ, ದುಸ್ಸಾಹಸಕ್ಕೆ ಇಳಿದರೆ ಭಾರೀ ಬೆಲೆ ತೆರಬೇಕಾಗುತ್ತದೆ: ಈಶ್ವರಪ್ಪ ಎಚ್ಚರಿಕೆ

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುವುದು ಸರಿಯಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವುದು ಅವರ ಸ್ವಂತ ವಿನಾಶಕ್ಕೆ ಕಾರಣವಾಗಬಹುದು.
K.S Eshwarappa
ಕೆ.ಎಸ್ ಈಶ್ವರಪ್ಪ
Updated on

ಬೆಂಗಳೂರು: ಆರ್‌ಎಸ್‌ಎಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ, ಈ ದುಸ್ಸಾಹಸಕ್ಕೆ ಕೈ ಹಾಕಿದ್ದೇ ಆದರೆ, ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುವುದು ಸರಿಯಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವುದು ಅವರ ಸ್ವಂತ ವಿನಾಶಕ್ಕೆ ಕಾರಣವಾಗಬಹುದು ಎಂದು ಹೇಳಿದರು.

ದೇಶದಲ್ಲಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಿದ ಅತ್ಯುನ್ನತ ನಾಯಕರು ಎಲ್ಲಿಯೂ ಇಲ್ಲ, ಅನೇಕ ಬಿಕ್ಕಟ್ಟುಗಳ ಸಮಯದಲ್ಲಿ ಆರ್‌ಎಸ್‌ಎಸ್ ರಾಷ್ಟ್ರಕ್ಕೆ ಸಹಾಯ ಮಾಡಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಬೀದಿಗಳಲ್ಲಿ ಜನರಿಗೆ ಸೇವೆ ಸಲ್ಲಿಸುವ ಮೂಲಕ ಸಂಘವು ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ಆರ್‌ಎಸ್‌ಎಸ್ ಮೂಲಭೂತವಾಗಿ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆಯಾಗಿದ್ದು, ಇದು ಶಿಸ್ತು ಮತ್ತು ದೇಶಭಕ್ತಿಯನ್ನು ಹುಟ್ಟುಹಾಕುವ ಮೂಲಕ ಸಾಮರಸ್ಯವನ್ನು ಹರಡಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ಯಾವುದೇ ಆರ್‌ಎಸ್‌ಎಸ್ ಕಾರ್ಯಕರ್ತ ಕಾರ್ಯಕಾರಿಣಿಯ ಯಾವುದೇ ವ್ಯಕ್ತಿ ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಸಂಘದ ಚಟುವಟಿಕೆಗಳನ್ನು ನಿಷೇಧಿಸುವುದು ಕಾಂಗ್ರೆಸ್ ನಾಯಕರ ಪತನಕ್ಕೆ ಕಾರಣವಾಗಬಹುದು ಎಂದು ಹೇಳಿದರು.

K.S Eshwarappa
ಖರ್ಗೆ RSS ವಿರೋಧಿ ಆಟ ನೋಡುತ್ತಿದ್ದರೆ, CM ಸ್ಥಾನಕ್ಕಾಗಿ ಡಿಕೆಶಿಯನ್ನೇ ಓವರ್ ಟೇಕ್ ಮಾಡುತ್ತಿರುವಂತಿದೆ..!

ಇದೇ ವೇಳೆ ಈಶ್ವರಪ್ಪ ಅವರು ಕುರುಬ ಸಮುದಾಯವನ್ನ ಎಸ್ಟಿಗೆ ಸೇರ್ಪಡೆ ಮಾಡಬೇಕೆಂದೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಕುರುಬ ಸಮುದಾಯ ತೀರಾ ಬಡ ಸಮುದಾಯ. ಕುಲ ಶಾಸ್ತ್ರೀಯ ಅಧ್ಯಯನವೂ ಇದನ್ನ ಹೇಳಿದೆ. ನಮ್ಮ ಮೀಸಲಾತಿಗಾಗಿ ಈ ಹಿಂದೆ ದೊಡ್ಡ ಹೋರಾಟ ಮಾಡಿದ್ದೇವೆ. ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ನಾವು ಹೋರಾಟ ಮಾಡಿದ್ದೆವು. ಅದರ ಫಲವಾಗಿ ಅಂದಿದ್ದ ಬೊಮ್ಮಾಯಿ ಮತ್ತು ಈಗಿರುವ ಸಿದ್ದರಾಮಯ್ಯ ಸರ್ಕಾರ ಈ ಶಿಫಾರಸನ್ನ ಕೇಂದ್ರಕ್ಕೆ ಕಳುಹಿಸಿದ್ದರು. ಕೇಂದ್ರ ಏನು ಮಾಡುತ್ತದೆ ಎನ್ನುವುದು ಈಗ ವಿಚಾರ. ಅವರು ಇದಕ್ಕೆ ಗಮನ ಕೊಡಬೇಕೆಂದು ಬಯಸುತ್ತಿದ್ದೇನೆಂದು ಹೇಳಿದರು.

ನಮ್ಮ ಬೇಡಿಕೆ ಹೊಸದಲ್ಲ. ಬಿಟ್ಟು ಹೋಗಿರುವ ನಮ್ಮ ಸಮುದಾಯವನ್ನ ಸೇರಿಸಿ ಎನ್ನುವುದು ಮನವಿ. ದೆಹಲಿಯಲ್ಲಿ ನಮ್ಮ ಸ್ವಾಮೀಜಿಗಳ ಜೊತೆ ತೆರಳಿ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೆವು. ಈಗಲೂ ಅದೇ ಮನವಿ ಮಾಡುತ್ತೇವೆ. ಅ.24 ರಂದು ವಿಜಯಪುರದಲ್ಲಿ ಸಭೆ ನಡೆಸಲಿದ್ದೇವೆ. ಸಮುದಾಯದ ಪ್ರಮುಖರು ಅದರಲ್ಲಿ ಭಾಗವಹಿಸಿ ಉಳಿದ ತೀರ್ಮಾನ ತೆಗೆದುಕೊಳ್ತೇವೆ ಎಂದು ತಿಳಿಸಿದರು.

K.S Eshwarappa
ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್!

ಮಾಜಿ ಸಚಿವ ಹೆಚ್.ವಿಶ್ವನಾಥ ಮಾತಾಡಿ, ಮೀಸಲಾತಿ ದೇಶ ಹಾಗೂ ರಾಜ್ಯದಲ್ಲಿ ದೊಡ್ಡ ಸಮಸ್ಯೆ ರೀತಿ ಆಗಿದೆ. ಎಲ್ಲರೂ ಮೀಸಲಾತಿ ಕೇಳುವ ಸ್ಥಿತಿ ಎದುರಾಗಿದೆ. ಬ್ರಿಟಿಷರ ಕಾಲದಿಂದಲೂ ಮೀಸಲಾತಿ ಹಲವು ರೀತಿ ಸಿಗುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಕುರುಬ ಸಮುದಾಯದ ನಾವೂ ಮೀಸಲಾತಿಗೆ ಆಗ್ರಹಿಸುತ್ತಿದ್ದೇವೆ. ನಮ್ಮ ಸಮುದಾಯದ ಹಿಂದಿನ ಸ್ಥಿತಿಗತಿಗಳನ್ನ ಈಗಾಗಲೇ ಗುರುತಿಸಲಾಗಿದೆ. ಕೊಡಗಿನಲ್ಲಿ ಕುರುಬರಿಗೆ ಮೀಸಲಾತಿ ದೊರೆಯುತ್ತಿದೆ. ಇದಕ್ಕೆ ಮಿತಿಯನ್ನ ಹಾಕಲಾಗಿದೆ. ಈ ಮಿತಿಯನ್ನ ತೆಗೆದು ರಾಜ್ಯಾದ್ಯಂತ ವಿಸ್ತರಿಸಲು ಮನವಿ ಮಾಡ್ತಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com