BJP-RSS ವಿರುದ್ಧ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಪ್ರಸ್ತುತ ನಡೆಯುತ್ತಿರುವ ಅಭಿಯಾನವು ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಾರಂಭಿಸಿದ ರಾಷ್ಟ್ರೀಯ ಆಂ
RSS baitak
ಆರ್‌ಎಸ್‌ಎಸ್
Updated on

ಮೈಸೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ರಾಷ್ಟ್ರವ್ಯಾಪಿ ಆರಂಭಿಸಿರುವ 'ವೋಟ್ ಚೋರಿ' ಜಾಗೃತಿ ಅಭಿಯಾನದಂತೆ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ಶನಿವಾರ ಆರಂಭಿಸಿದೆ.

ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಶನಿವಾರ ಗಾಂಧಿ ಚೌಕದಲ್ಲಿ ಬೃಹತ್ ಸಹಿ ಅಭಿಯಾನ ಮತ್ತು ಪ್ರತಿಭಟನೆಯನ್ನು ನಡೆಸಿದವು.

ಪ್ರತಿಭಟನೆ ವೇಳೆ ಮಾತನಾಡಿದ ಮಾಜಿ ಸಂಸದ ಮತ್ತು ಮೈಸೂರು ಜಿಲ್ಲಾ ಪಕ್ಷದ ಉಸ್ತುವಾರಿ ವಿ.ಎಸ್. ಉಗ್ರಪ್ಪ ಅವರು, ಬಿಜೆಪಿ ದೇಶಾದ್ಯಂತ ಅರಾಜಕತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿಯ ವಿಭಜಕ ಮತ್ತು ಅರಾಜಕ ರಾಜಕೀಯಕ್ಕೆ ಕಾಂಗ್ರೆಸ್ ಎಂದಿಗೂ ಮಣಿಯುವುದಿಲ್ಲ, ಪ್ರಸ್ತುತ ನಡೆಯುತ್ತಿರುವ ಅಭಿಯಾನವು ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಾರಂಭಿಸಿದ ರಾಷ್ಟ್ರೀಯ ಆಂದೋಲನದ ಭಾಗವಾಗಿದೆ ಎಂದು ಹೇಳಿದರು.

RSS baitak
ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ: ಪ್ರಿಯಾಂಕ್ ಖರ್ಗೆ

ಅಸಂವಿಧಾನಿಕ ವಿಧಾನಗಳ ಮೂಲಕ ಅಧಿಕಾರವನ್ನು ವಶಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಬಿಜೆಪಿ ಸರ್ಕಾರ ದೇಶದಲ್ಲಿ ಅವ್ಯವಸ್ಥೆ ಮತ್ತು ಕೋಮು ಅಶಾಂತಿಯನ್ನು ಸೃಷ್ಟಿಸಿದೆ. ಈ ವಿಭಜಕ ಶಕ್ತಿಗಳನ್ನು ಎದುರಿಸಲು ಕಾಂಗ್ರೆಸ್ ದೃಢನಿಶ್ಚಯ ಹೊಂದಿದೆ. ಕೋಮು ರಾಜಕೀಯದಿಂದ ಭಾರತವನ್ನು ರಕ್ಷಿಸಲು ಮತ್ತೊಮ್ಮೆ ಕೇಂದ್ರದಲ್ಲಿ ಸರ್ಕಾರ ರಚಿಸುತ್ತದೆ ಎಂದು ತಿಳಿಸಿದರು.

ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ. ಜೆ. ವಿಜಯ್ ಕುಮಾರ್ ಅವರು ಮಾತನಾಡಿ, ದೇಶಾದ್ಯಂತ ಜನರು ಬಿಜೆಪಿಯ ದುರಾಡಳಿತದಿಂದ ಬೇಸತ್ತಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಒಂದೇ ನಾಣ್ಯದ ಎರಡು ಮುಖಗಳು. ಎರಡೂ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಚೈತನ್ಯವನ್ನು ದುರ್ಬಲಗೊಳಿಸಲು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com