

ಬೆಂಗಳೂರು: ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಜೊತೆಗೆ, ಏಪ್ರಿಲ್ 9 ರಂದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಮುನ್ನ ರಾಜ್ಯದಲ್ಲಿ ರಾಜಕೀಯವೂ ರಂಗೇರುತ್ತಿದೆ.
ಆಡಳಿತಾರೂಢ ಕಾಂಗ್ರೆಸ್ ತನ್ನ ಸ್ಥಾನಗಳನ್ನು ಉಳಿಸಿಕೊಳ್ಳಲು ತನ್ನ ಐದು ಗ್ಯಾರಂಟಿ ಯೋಜನೆಗಳ ಮೇಲೆ ಅವಲಂಬಿತವಾಗಿದ್ದರೆ, ವಿರೋಧ ಪಕ್ಷ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು, ಸಾಲ ಪಡೆಯುವ ಮೂಲಕ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದೆ ಎಂದು ಆರೋಪಿಸಿದೆ.
ಈ ಸರ್ಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ. ಕೇಂದ್ರವನ್ನು ತಪ್ಪಿತಸ್ಥನಂತೆ ಬಿಂಬಿಸುತ್ತಿರುವ ನಿಮ್ಮ (ಕಾಂಗ್ರೆಸ್) ಪ್ರಯತ್ನ ಎಂದಿಗೂ ಸಫಲವಾಗುವುದಿಲ್ಲ. ಏಕೆಂದರೆ ಜನರು ನಂಬುವುದಿಲ್ಲ. ಜಿಎಸ್ಟಿ ಪಾಲು ಮತ್ತು ಅನುದಾನಗಳನ್ನು ಪಡೆಯಲು ಸರಿಯಾದ ವರದಿಗಳನ್ನು ಸಲ್ಲಿಸಲು ವಿಫಲವಾದ ರಾಜ್ಯ ಸರ್ಕಾರವು ತನ್ನ ದೋಷಪೂರಿತ ನಿರ್ಧಾರಗಳನ್ನು ಮುಚ್ಚಿಕೊಳ್ಳಲು ಕೇಂದ್ರದತ್ತ ಬೆರಳು ತೋರಿಸುತ್ತಿದೆ.
ನೀವು ಮಾಡಿರುವ ಒಟ್ಟು ಸಾಲದ ಮೊತ್ತ 8.14 ಲಕ್ಷ ಕೋಟಿ ರೂ.ಗಳನ್ನು ದಾಟಿದೆ. 2025-26ರ ಆರ್ಥಿಕ ವರ್ಷದಲ್ಲಿ, ನೀವು ರೂ. 48,000 ಕೋಟಿ ಬಡ್ಡಿಯನ್ನು ಪಾವತಿಸಿದ್ದೀರಿ. ಸಾಲದ ಮೊತ್ತ ಹೆಚ್ಚುತ್ತಲೇ ಇದೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯ. ಇದು ಆರ್ಥಿಕ ದಿವಾಳಿತನವಲ್ಲವೇ? ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಅಭಿವೃದ್ಧಿಯ ಕೊರತೆಯಿಂದಾಗಿ ರಾಜ್ಯದ ಜನರು ಸಿದ್ದರಾಮಯ್ಯ ಸರ್ಕಾರದ ಮೇಲೆ ಬೇಸತ್ತಿದ್ದಾರೆ ಎಂದು ಪರಿಷತ್ತಿನ ಛಲವಾದಿ ನಾರಾಯಣಸ್ವಾಮಿ ಹೇಳಿದರು. “ನಾನು ಪ್ರಚಾರಕ್ಕಾಗಿ ಬಾಗಲಕೋಟೆಯಲ್ಲಿದ್ದೆ. ಯಾವುದೇ ಅಭಿವೃದ್ಧಿ ಕೆಲಸಗಳು ಜಾರಿಗೆ ಬರದ ಕಾರಣ ಅಲ್ಲಿನ ಜನರು ಸರ್ಕಾರವನ್ನು ಶಪಿಸುತ್ತಿದ್ದಾರೆ. ಕಾಂಗ್ರೆಸ್ ಭರವಸೆಗಳನ್ನು ಬಳಸಿಕೊಂಡು ಮತ ಕೇಳುತ್ತಿದೆ.
ಉಪಚುನಾವಣೆಯಲ್ಲಿ ಸೋಲುವ ಭಯದಿಂದ ಸಿಎಂ ತಮ್ಮ ಪಕ್ಷ ಸೋತರೆ ಉಚಿತ ಕೊಡುಗೆಗಳನ್ನು ನಿಲ್ಲಿಸಲಾಗುವುದು ಎಂದು ಹೇಳುವ ಮೂಲಕ ಮತದಾರರನ್ನು ಹೆದರಿಸಿದ್ದಾರೆ ಎಂದು ನಾರಾಯಣಸ್ವಾಮಿ ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಸರ್ಕಾರವು ಎರಡು ತಿಂಗಳ ಗೃಹ ಲಕ್ಷ್ಮಿ ಮೊತ್ತವನ್ನು ಚುನಾವಣೆ ನಡೆಯಲಿರುವ ಎರಡು ಕ್ಷೇತ್ರಗಳ ಫಲಾನುಭವಿಗಳಿಗೆ ಮಾತ್ರ ಪಾವತಿಸಿದೆ ಮತ್ತು ಅದನ್ನು ಇನ್ನೊಂದು ತಿಂಗಳಿಗೆ ಮುಂಚಿತವಾಗಿ ಬಿಡುಗಡೆ ಮಾಡಲಿದೆ ಎಂದು ಅವರು ಆರೋಪಿಸಿದರು. ರಾಜ್ಯದ ಆಡಳಿತವನ್ನು ನಿರ್ಲಕ್ಷಿಸಿ ಐದು ದಿನಗಳ ಕಾಲ ಪಟ್ಟಣದಲ್ಲಿ ಬೀಡುಬಿಟ್ಟಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ಬಾಗಲಕೋಟೆ ಅಭ್ಯರ್ಥಿ ವೀರಣ್ಣ ಚರಂತಿಮಠ ಕಿಡಿ ಕಾರಿದ್ದಾರೆ.
ಏತನ್ಮಧ್ಯೆ, ಹಿಂದುತ್ವದ ಫೈಯರ್ಬ್ರಾಂಡ್ ಮತ್ತು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮೈಸೂರು- ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹಿಂದುತ್ವದ ಅಜೆಂಡಾ ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಇದು ಚರಂತಿಮಠ ಅವರಿಗೆ ಪ್ಲಸ್ ಆಗಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಸಿದ್ದರಾಮಯ್ಯ ತಮ್ಮ ಜೇಬಿನಿಂದ ಉಚಿತ ಗ್ಯಾರಂಟಿಗಳನ್ನು ನೀಡುತ್ತಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಗೋಕಾಕ್ನ 650 ಹಿಂದೂ ರೈತರಿಗೆ ರಾಜ್ಯ ವಕ್ಫ್ ಮಂಡಳಿಯು ತಮ್ಮ ಸ್ವಾಧೀನದಲ್ಲಿರುವ ಭೂಮಿಯ ಮೇಲಿನ ಮಾಲೀಕತ್ವವನ್ನು ಸಾಬೀತುಪಡಿಸುವಂತೆ ನೋಟಿಸ್ ಜಾರಿ ಮಾಡಿದೆ. ಈ ವಿಷಯವನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸವಾರಿ ಮಾಡುವ ಸಾಧ್ಯತೆಯಿದೆ.
ಮತ್ತೊಬ್ಬ ಕುರುಬ ನಾಯಕ ಎಚ್ ವೈ ಮೇಟಿ ಹೊಂದಿದ್ದ ಸ್ಥಾನವನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರ ಪ್ರತಿಷ್ಠೆ ಪಣಕ್ಕಿಟ್ಟಿರುವುದರಿಂದ, ಅವರ ಆಪ್ತ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಥಾನವನ್ನು ಗೆಲ್ಲಲು ಸೂಕ್ಷ್ಮ ತಂತ್ರ ರೂಪಿಸಿದ್ದಾರೆ. ಚರಂತಿಮಠ ಅವರ ಕಿರಿಯ ಸಹೋದರ ಮಲ್ಲಿಕಾರ್ಜುನ್ ಮತ್ತು ಇತರ ಸ್ಥಳೀಯ ಬಿಜೆಪಿ ನಾಯಕರ ಬೆಂಬಲ ಪಡೆಯಲು ಕಸರತ್ತು ನಡೆಸಿದ್ದಾರೆ.
ಚರಂತಿಮಠ ಅವರ ಆಕ್ರಮಣಕಾರಿ ವ್ಯಕ್ತಿತ್ವಕ್ಕೆ ವಿರುದ್ಧವಾಗಿ, ಎಚ್ವೈ ಮೇಟಿ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರನ್ನು ವಿನಮ್ರ ವ್ಯಕ್ತಿ ಎಂದು ಬಿಂಬಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ದಾವಣಗೆರೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರನ್ನು ತಳಮಟ್ಟದ ನಾಯಕ ಎಂದು ಬಿಂಬಿಸುತ್ತಿದೆ.
ಆದರೆ ತೋಟಗಾರಿಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಮತ್ತು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಪುತ್ರ ಕಾಂಗ್ರೆಸ್ನ ಸಮರ್ಥ್ ಶಾಮನೂರು ಗಣ್ಯ ವ್ಯಕ್ತಿಯಾಗಿದ್ದು ಮತದಾರರಿಗೆ ಸಿಗುವುದಿಲ್ಲ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ.
2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಲ್ಪಟ್ಟ ಕುರುಬ ನಾಯಕ ಮತ್ತು ಇನ್ಸೈಟ್ ಐಎಎಸ್ ಅಕಾಡೆಮಿಯ ಶಿಕ್ಷಣ ತಜ್ಞ ವಿನಯ್ ಕುಮಾರ್ ಜಿಬಿ ಯುವಕರನ್ನು ಓಲೈಸಲು ಬಿಜೆಪಿಗೆ ಸೇರಿದ್ದಾರೆ.
ಕಾಂಗ್ರೆಸ್ನೊಳಗಿನ ಕೆಲವರು ಪಕ್ಷವು ಆ ಸಮುದಾಯದ ಸದಸ್ಯರನ್ನು ಕಣಕ್ಕಿಳಿಸದೆ ಮುಸ್ಲಿಮರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದ್ದಾರೆ. ಮುಸ್ಲಿಂ ಸಮುದಾಯದ ಮತಗಳು ಸಮುದಾಯದ ಸ್ವತಂತ್ರ ಅಭ್ಯರ್ಥಿಗಳ ನಡುವೆ ವಿಭಜನೆಯಾಗಬೇಕೆಂದು ಬಿಜೆಪಿ ಆಶಿಸುತ್ತದೆ.
Advertisement