'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಹೆಚ್.ಡಿ. ದೇವೇಗೌಡ ಅವರ ಕುಟುಂಬದ ಬಗ್ಗೆ ದೂರುವವರು, ಟೀಕಿಸುವವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಎಷ್ಟು ಜನರು ರಾಜಕೀಯದಲ್ಲಿದ್ದಾರೆ ಎಂದು ಹೇಳಲಿ ಎಂದು ಕುಮಾರಸ್ವಾಮಿ ಹೇಳಿದರು.
H D Kumaraswamy and Siddaramaiah
ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ
Updated on

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ತಮ್ಮ ವೈದ್ಯರಾಗಿದ್ದ ಎರಡನೇ ಮಗನನ್ನು ‘ವಸೂಲಿ’ ಉದ್ದೇಶಕ್ಕಾಗಿ ರಾಜಕೀಯಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.

ನಿನ್ನೆ ಶುಕ್ರವಾರ ಮಂಡ್ಯ ಜಿಲ್ಲೆಯ ಟಿ.ಎಸ್. ಛಾತ್ರಾ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕುಟುಂಬ ರಾಜಕೀಯವನ್ನು ಟೀಕಿಸುತ್ತಿರುವ ಸಿದ್ದರಾಮಯ್ಯ ಅವರು ಮೊದಲು ತಮ್ಮ ಹಿರಿಯ ಮಗನನ್ನು ರಾಜಕೀಯದಲ್ಲಿ ಬೆಳೆಸಲು ಬಯಸಿದ್ದರು. ಆದರೆ ಅವರ ಅಕಾಲಿಕ ನಿಧನದ ನಂತರ, ತಮ್ಮ ವೈದ್ಯ ಮಗನನ್ನು ರಾಜಕೀಯಕ್ಕೆ ತಂದಿದ್ದಾರೆ. ಮೊದಲು ಅವರು ಕುಟುಂಬ ರಾಜಕೀಯವನ್ನು ಟೀಕಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ಹೆಚ್.ಡಿ. ದೇವೇಗೌಡ ಅವರ ಕುಟುಂಬದ ಬಗ್ಗೆ ದೂರುವವರು, ಟೀಕಿಸುವವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಎಷ್ಟು ಜನರು ರಾಜಕೀಯದಲ್ಲಿದ್ದಾರೆ ಎಂದು ಹೇಳಲಿ ಎಂದರು.

H D Kumaraswamy and Siddaramaiah
ಪ್ರಧಾನಿ ಮೋದಿ ಸಾಲ ಮಾಡಿಲ್ಲವೇ? ಅಚ್ಚೇ ದಿನ್ ಯಾರಿಗಾದರೂ ಬಂದಿದೆಯೇ?: ಡಿ.ಕೆ ಶಿವಕುಮಾರ್

ದೇವೇಗೌಡರು ನಮ್ಮನ್ನು ವಸೂಲಿ ಉದ್ದೇಶಕ್ಕಾಗಿ ರಾಜಕೀಯಕ್ಕೆ ತರಲಿಲ್ಲ. ಬಡವರ ಸೇವೆ ಮಾಡಲು ರಾಜಕೀಯಕ್ಕೆ ತಂದಿದ್ದಾರೆ. ನಮ್ಮ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ. 2013ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಇದು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಆದರೆ ಅಧಿಕಾರದ ಸವಿ ಕಂಡ ನಂತರ, 2028ರವರೆಗೆ ನಾನು ಮುಖ್ಯಮಂತ್ರಿಯೇ ಎಂದು ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಜಾಗತಿಕ ಯುದ್ಧ ಪರಿಸ್ಥಿತಿಯಲ್ಲಿಯೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಇತರ ದೇಶಗಳು ಲಾಕ್‌ಡೌನ್ ಹಂತಕ್ಕೆ ತಲುಪಿವೆ. ಆದರೆ ನಮ್ಮ ಕೇಂದ್ರ ಸರ್ಕಾರ ಜನರ ಸಮಸ್ಯೆಗಳಿಗೆ ಧನಾತ್ಮಕವಾಗಿ ಪ್ರತಿಕ್ರಿಯಿಸುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.

H D Kumaraswamy and Siddaramaiah
2028 ಕ್ಕೆ ಕಾಂಗ್ರೆಸ್ ನಿರ್ನಾಮ; ಸಿದ್ದರಾಮಯ್ಯ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪ್ ಸಿಂಹ

ಐಪಿಎಲ್ ಟಿಕೆಟ್‌
ಇತ್ತೀಚಿನ ಐಪಿಎಲ್ ಟಿಕೆಟ್ ವಿಚಾರದ ಬಗ್ಗೆ ಶಾಸಕರು ಎತ್ತಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಐಪಿಎಲ್ ಟಿಕೆಟ್ ಬೇಡಿಕೆ ಅಸಂಬದ್ಧವಾಗಿದೆ. ಮೊದಲು ಶಾಸಕರು ಮತ್ತು ಸಚಿವರಿಗೆ ಗೌರವ ಸೂಚಕವಾಗಿ ಒಂದು ಅಥವಾ ಎರಡು ಪಾಸ್‌ಗಳನ್ನು ನೀಡಲಾಗುತ್ತಿತ್ತು. ಈಗ ಪ್ರತಿಯೊಬ್ಬ ಶಾಸಕರಿಗೂ ಮೂರರಿಂದ ನಾಲ್ಕು ಟಿಕೆಟ್‌ ಬೇಡಿಕೆ ಇಟ್ಟು, ಇದನ್ನು ಚರ್ಚೆಯ ವಿಷಯವನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಮೇ ತಿಂಗಳಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರಕ್ಕೆ ಶಿಲಾನ್ಯಾಸ ಮಾಡುವ ಗುರಿ ಹೊಂದಿದ್ದೇವೆ, ಸರ್ಕಾರ ಯಾವ ಪ್ರದೇಶವನ್ನು ಅಭಿವೃದ್ಧಿಪಡಿಸಲು ಸಿದ್ಧವಿದೆ ಎಂಬುದನ್ನು ನೋಡಬೇಕು. ಒಟ್ಟಾರೆ, ಈ ಯೋಜನೆ ಒಂದು ಪಟ್ಟಣದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com