ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಯತ್ನಾಳ್‌ ಬಿಜೆಪಿಗೆ ವಾಪಸ್: ಸಂಚಲನ ಸೃಷ್ಟಿಸಿದ ರಮೇಶ್‌ ಜಾರಕಿಹೊಳಿ ಹೇಳಿಕೆ

ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್‌ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
Ramesh Jarkiholi
ರಮೇಶ್ ಜಾರಕಿಹೊಳಿ
Updated on

ಬೆಳಗಾವಿ: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೆಲವೇ ದಿನಗಳಲ್ಲಿ ವಾಪಸ್ ಬಿಜೆಪಿಗೆ ಬರುತ್ತಾರೆ ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್‌ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ ಎಂದರು.

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆ. ಯತ್ನಾಳ್ ಪ್ರಚಾರದಿಂದ ನಮ್ಮ ಅಭ್ಯರ್ಥಿಗೆ ಲಾಭವಾಗಬಹುದು ಎಂದರು.

Ramesh Jarkiholi
Watch | ಬಿಜೆಪಿ ಅಭ್ಯರ್ಥಿ ಚರಂತಿಮಠ ಪರ ಪ್ರಚಾರ: ಎಂಬಿ ಪಾಟೀಲ್ - ಯತ್ನಾಳ್ ಜಟಾಪಟಿ!

ಯತ್ನಾಳ್ ಬಿಜೆಪಿಗೆ ಬಂದರೆ ಒಳ್ಳೆಯದು. ಹಿಂದೂ ಸಂಘಟನೆ ಮತ್ತು ಬಿಜೆಪಿ ಮತ ಕ್ರೋಢಿಕರಣಕ್ಕೆ ಅನುಕೂಲವಾಗುತ್ತದೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷದವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದು ಗೆಲ್ಲುವ ವಿಶ್ವಾಸ ಇದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com