ಕಾಂಗ್ರೆಸ್ ಒಳಗಿನ ಸಮಸ್ಯೆಗಳನ್ನು ಬಗೆಹರಿಸಲು ಸಂಪುಟ ಪುನಾರಚನೆ ಅಗತ್ಯ: ಸತೀಶ್ ಜಾರಕಿಹೊಳಿ

ಸರ್ಕಾರಕ್ಕೆ ಸುಮಾರು 30 ತಿಂಗಳುಗಳ ಅವಧಿ ಪೂರ್ಣಗೊಂಡಿರುವುದರಿಂದ ಈಗ ಸಚಿವ ಸಂಪುಟ ಪುನಾರಚನೆಗೆ ಗಮನ ಹರಿಸುವ ಸಮಯ ಬಂದಿದೆ ಎಂದು ಹೇಳಿದರು.
Satish Jarakiholi
ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ಕಾಂಗ್ರೆಸ್ ಪಕ್ಷದ ಒಳಗಿನ ಸಮಸ್ಯೆಗಳನ್ನು ಪರಿಹರಿಸಬೇಕಿದ್ದು, ಸಚಿವ ಸಂಪುಟ ಪುನಾರಚನೆ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ.

ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಸುಮಾರು 30 ತಿಂಗಳುಗಳ ಅವಧಿ ಪೂರ್ಣಗೊಂಡಿರುವುದರಿಂದ ಈಗ ಸಚಿವ ಸಂಪುಟ ಪುನಾರಚನೆಗೆ ಗಮನ ಹರಿಸುವ ಸಮಯ ಬಂದಿದೆ ಎಂದು ಹೇಳಿದರು.

ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ತಾವು ಕೆಪಿಸಿಸಿ ಅಧ್ಯಕ್ಷರಾಗುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಸಿಸಿ ನಾಯಕತ್ವದಲ್ಲಿ ಬದಲಾವಣೆ ಅಗತ್ಯ ಮತ್ತು ಅನಿವಾರ್ಯವಾಗಿದೆ ಎಂದು ಹೇಳಿದರು. ಆದರೆ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದರು.

Satish Jarakiholi
ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ಸಿಎಂ-ಡಿಸಿಎಂ ನಿರತ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

ಆಂತರಿಕ ಮೀಸಲಾತಿ ಜಾರಿಗೆ ಸಂಬಂಧಿಸಿದ ಪ್ರಶ್ನೆಗೆ, ಸರ್ಕಾರ ಬದ್ಧವಾಗಿದೆ ಆದರೆ ಜಾರಿಗೆ ಮುನ್ನ ಸುಪ್ರೀಂ ಕೋರ್ಟ್ ಸೂಚನೆಯಂತೆ ಸಂಬಂಧಿತ ಅಂಕಿಅಂಶಗಳನ್ನು ಸಂಗ್ರಹಿಸಬೇಕಿದೆ ಎಂದು ಹೇಳಿದರು. ಯಾವುದೇ ಸಮುದಾಯದ ವಿರುದ್ಧ ಸರ್ಕಾರ ಇಲ್ಲ, ಎಲ್ಲರ ಅಭಿವೃದ್ಧಿ ಮುಖ್ಯವಾಗಿದೆ ಎಂದರು.

ಬಾಗಲಕೋಟೆ ಉಪಚುನಾವಣೆಯಲ್ಲಿ ಹಣ ಹಂಚಿಕೆಯ ಬಗ್ಗೆ ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಪಕ್ಷಗಳೂ ಇಂತಹ ಕ್ರಮಗಳಲ್ಲಿ ತೊಡಗುತ್ತವೆ ಮತದಾರರಿಗೆ 10 ರೂಪಾಯಿಯಾಗಲಿ 1,000 ರೂಪಾಯಿಯಾಗಲಿ ಕೊಡುವುದೂ ತಪ್ಪೇ ಎಂದು ಹೇಳಿದರು.

ಇದಲ್ಲದೆ, ಉಪಚುನಾವಣೆಗಳ ಹೆಚ್ಚಿನ ವೆಚ್ಚವನ್ನು ತಪ್ಪಿಸಲು, ಹಾಲಿ ಇರುವ ಶಾಸಕರು ಸಾವಿಗೀಡಾದರೆ ಅದೇ ಪಕ್ಷಕ್ಕೆ ಬದಲಿ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಲು ಅವಕಾಶ ನೀಡುವಂತಹ ಹೊಸ ಕಾನೂನು ತರಬೇಕು ಎಂದು ಅವರು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com