ದಾವಣಗೆರೆ ದಂಗಲ್: ಶಾಮನೂರು ವಿರುದ್ಧ ಕ್ರಮ ಯಾಕಿಲ್ಲ? ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ಇಡೀ ಅಹಿಂದ ವಿರೋಧ ಕಟ್ಟಿಕೊಳ್ಳುತ್ತಿದೆ!

ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರ ಪರ ಮತಯಾಚನೆ ಮಾಡಿದ ಶಾಮನೂರು ಶಿವಶಂಕರಪ್ಪ ಅವರ ವಿರುದ್ಧ ಕಾಂಗ್ರೆಸ್ ಯಾಕೆ ಕ್ರಮ ಕೈಗೊಳ್ಳಲಿಲ್ಲ?
Ulema express discontent over Davanagere bypoll, flag minority representation concerns
ಉಲಮಾ ಎ ಕರ್ನಾಟಕ ಸಂಘಟನೆಯ ಮುಖಂಡರು
Updated on

ಬೆಂಗಳೂರು: ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

ಈ ಸಂಬಂಧ ಗುರುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಉಲಮಾ ಎ ಕರ್ನಾಟಕ ಸಂಘಟನೆಯ ಮುಖಂಡರು, ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ಮತ್ತು ಅಲ್ಪಸಂಖ್ಯಾತ ಸಮುದಾಯದ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಎಂಎಲ್ಸಿ ನಸೀರ್ ಅಹ್ಮದ್ ಅವರನ್ನು ತೆಗೆದುಹಾಕಿದ ನಂತರ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪಕ್ಷದ ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಅಂಗೀಕರಿಸಿದ್ದಾರೆ. ಅಲ್ಲದೆ ಮತ್ತೊಬ್ಬ ಎಂಎಲ್ಸಿ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಹೊರಹಾಕಿದ ನಂತರ ಮುಸ್ಲಿಂ ಮುಖಂಡರು ಇಂದು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

Ulema express discontent over Davanagere bypoll, flag minority representation concerns
ನಿನ್ನ ಮೇಲೆ ಹೈಕಮಾಂಡ್ ಸಿಟ್ಟಾಗಿದೆ: ಜಮೀರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ; ಶೀಘ್ರದಲ್ಲೇ ತಲೆದಂಡ ಸಾಧ್ಯತೆ

ರಾಜ್ಯದಲ್ಲಿ ಕೇವಲ ಒಂದು ಕುಟುಂಬಕ್ಕಾಗಿ ಇಡೀ ಅಹಿಂದ ಸಮುದಾಯದ ವಿರೋಧ ಕಟ್ಟಿಕೊಳ್ಳುತ್ತಿರುವ ಕಾಂಗ್ರೆಸ್ ನಡೆ ಸ್ವೀಕಾರಾರ್ಹವಲ್ಲ ಎಂದು ಜಮೀಯತ್ ಉಲಮಾ ಹಿಂದ್ ರಾಜ್ಯಾಧ್ಯಕ್ಷ ಮುಫ್ತಿ ಇಫ್ತಿಕಾರ್ ಅಹ್ಮದ್ ಖಾಸ್ಮಿ ಅವರು ಹೇಳಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುಚಟಿಕೆ ಆರೋಪದ ಮೇಲೆ ಮುಸ್ಲಿಮ್ ನಾಯಕರ ವಿರುದ್ಧ ನಿಯಮಬಾಹಿರವಾಗಿ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳುತ್ತಿದೆ. ಯಾವುದೇ ಕ್ರಮ ಕೈಗೊಳ್ಳುವ ಮುನ್ನ ಶೋಕಾಸ್ ನೋಟಿಸ್ ನೀಡಿ, ಅವರಿಂದ ಸ್ಪಷ್ಟೀಕರಣ ಪಡೆಯಬೇಕಿತ್ತು ಎಂದು ಅವರು ಹೇಳಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರ ಪರ ಮತಯಾಚನೆ ಮಾಡಿದ ಶಾಮನೂರು ಶಿವಶಂಕರಪ್ಪ ಅವರ ವಿರುದ್ಧ ಕಾಂಗ್ರೆಸ್ ಯಾಕೆ ಕ್ರಮ ಕೈಗೊಳ್ಳಲಿಲ್ಲ? ಅದು ಪಕ್ಷ ವಿರೋಧಿ ಚಟುವಟಿಕೆ ಆಗಿರಲಿಲ್ಲವೇ? ಕೇವಲ ಸಂಶಯದ ಆಧಾರದ ಮೇಲೆ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹ್ಮದ್ ವಿರುದ್ಧ ನಿಯಮಬಾಹಿರವಾಗಿ ಕ್ರಮ ಕೈಗೊಂಡಿದ್ದು ಸರಿಯಲ್ಲ ಎಂದು ಖಾಸ್ಮಿ ಅಸಮಾಧಾನ ವ್ಯಕ್ತಪಡಿಸಿದರು.

2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ನಾವು ಕೇಳಿದ್ದೇವೆ. ಆದರೆ, ಹಾಲಿ ಕಾಂಗ್ರೆಸ್ ಶಾಸಕರಿದ್ದ ಕಾರಣ ಕೊಟ್ಟಿರಲಿಲ್ಲ. ಈ ಉಪ ಚುನಾವಣೆಯಲ್ಲಾದರೂ ಟಿಕೆಟ್ ಕೊಡಿ ಎಂದು ಪಕ್ಷದ ನಾಯಕರು, ಉಲಮಾ ಕೇಳಿದರು ಕೊಟ್ಟಿಲ್ಲ. ಬಾಗಲಕೋಟೆಯಲ್ಲಿ ಎಚ್.ವೈ.ಮೇಟಿ ಅವರ ಮಗನಿಗೆ ಕೊಟ್ಟರು. ಆದರೆ, ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಅವರ ಮೊಮ್ಮಗನಿಗೆ ಟಿಕೆಟ್ ಕೊಟ್ಟಿದ್ದು ತಪ್ಪು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com