

ಬೆಂಗಳೂರು: ಮುಸ್ಲಿಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ್ಯ ಮಾಡಿಲ್ಲ ಮತ್ತು ಅವರನ್ನು ಗುರಿಯಾಗಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಾವು, ಮುಸ್ಲಿಮರು ಯಾವತ್ತೂ ಸಹೋದರರಿದ್ದಂತೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಎಂದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರನ್ನ ರಕ್ಷಿಸುವಲ್ಲಿ ಅಸಹಾಯಕರಾಗಿದ್ದಾರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ರಾಜಣ್ಣ ಅವರ ಹೇಳಿಕೆ ವೈಯಕ್ತಿಕ. ಆ ಬಗ್ಗೆ ನಾನು ಮಾತನಾಡಲ್ಲ ಎಂದರು.
ಒಂದು ಕ್ಷೇತ್ರದಿಂದ ಎಲ್ಲಾ ಬದಲಾವಣೆ ಆಗಲಿದೆ ಎಂದು ತಿಳಿದುಕೊಳ್ಳುವುದು ಬೇಡ. ನಾವು ಮುಸ್ಲಿಮರು ಸಹೋದರರು ಇದ್ದಂತೆ. ಇಂದು ಸಹ ಮುಂದೆಯೂ. ಒಂದು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿಲ್ಲ ಅಂತಾ ಬೇಸರ ಮಾಡಿಕೊಳ್ಳೋದು ಬೇಡ. ಆ ರೀತಿ ಆಗಿದ್ದರೆ ಸಿಎಂ, ಡಿಸಿಎಂ ನಾವೆಲ್ಲರೂ ಸೇರಿ ಸರಿಪಡಿಸುತ್ತೇವೆ ಎಂದರು.
Advertisement