ಮುಂದೊಂದು ದಿನ ನಿಖಿಲ್ CM ಆಗೇ ಆಗ್ತಾರೆ: ಮೂರು ಚುನಾವಣೆಯಲ್ಲಿ ಸೋತಿದ್ದರೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ; G.D ಹರೀಶ್ ಗೌಡ

ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.
Nikhil Kumaraswamy and harish gowda
ನಿಖಿಲ್ ಕುಮಾರಸ್ವಾಮಿ ಮತ್ತು ಹರೀಶ್ ಗೌಡ
Updated on

ಮೈಸೂರು: ಮೂರು ಚುನಾವಣೆಯಲ್ಲಿ ಸೋತಿದ್ದರೂ ನಿಖಿಲ್ ಅಧಿಕಾರಕ್ಕೆ ಅಂಟಿಕೊಂಡಿಲ್ಲ, ಪಕ್ಷದ ಬೆಳವಣಿಗೆಗಾಗಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಕೂಡ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಶಾಸಕೆ ಜಿ.ಡಿ ಹರೀಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.

ಇಂದಿನ ಕಾರ್ಯಕ್ರಮದ ಮೂಲಕ ಜೆಡಿಎಸ್ ತನ್ನ ಶಕ್ತಿಯನ್ನು ತೋರಿಸಿದೆ. 2028ರ ವೇಳೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಆಶಯ ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದ ಅವರು, ಪಕ್ಷವನ್ನು ಸಂಘಟಿಸಲು ನಿಖಿಲ್‌ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Nikhil Kumaraswamy and harish gowda
ಮಹಿಳಾ ಮೀಸಲಾತಿ ಬಗ್ಗೆ DMK ವಾದ ಭಯ ಹುಟ್ಟಿಸುವಂತಿದೆ; ಸ್ಟಾಲಿನ್ ನಿಲುವು ದಕ್ಷಿಣ ರಾಜ್ಯಗಳ ಅಭಿಪ್ರಾಯವಲ್ಲ: ಎಚ್.ಡಿ ಕುಮಾರಸ್ವಾಮಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com