

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆ ವಿವಾದದ ನಂತರ ತಮ್ಮ ನಿಷ್ಠಾವಂತರ ತಲೆದಂಡ ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ವಿಷಯವಾಗಿ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳಲು ಸಿಎಂ ಬಣ ಕೆಲಸ ಮಾಡುತ್ತಿದ್ದು, ಮುಖ್ಯಮಂತ್ರಿಗಳ ವರ್ಚಸ್ಸಿಗೆ ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಲು ಮುಂದಾಗಿದೆ.
ಭಾನುವಾರ ಸಿದ್ದರಾಮಯ್ಯ ಆಪ್ತ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಿದರು. ಉಪಚುನಾವಣೆ ಪ್ರಚಾರದ ಸಮಯದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಎಂಎಲ್ಸಿ ಅಬ್ದುಲ್ ಜಬ್ಬಾರ್ ವಿರುದ್ಧ ಶಿಸ್ತು ಕ್ರಮ ಆತುರದಿಂದ ಕೂಡಿತ್ತು ಎಂದು ಸತೀಶ್ ಅಭಿಪ್ರಾಯಪಟ್ಟಿದ್ದಾರೆ.
ಸಿದ್ದರಾಮಯ್ಯ ಭೇಟಿಯಾದ ನಂತರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಸಹ ಸತೀಶ್ ಭೇಟಿಯಾದರು, ಅಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಮಾಜಿ ಎಂಎಲ್ಸಿ ಎಂ.ಸಿ. ವೇಣುಗೋಪಾಲ್ ಕೂಡ ಹಾಜರಿದ್ದರು.
ಮೇ 4 ರಂದು ಉಪಚುನಾವಣೆ ಮತ್ತು ಐದು ರಾಜ್ಯಗಳ ಫಲಿತಾಂಶಗಳ ನಂತರ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆಯನ್ನು ತೀವ್ರಗೊಳಿಸಬಹುದಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣವನ್ನು ಎದುರಿಸುವ ತಂತ್ರದ ಬಗ್ಗೆ ಅವರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅಸಹಾಯಕರಾಗಿರಲಿಲ್ಲ. ಆದರೆ ಕೆಲವೊಮ್ಮೆ, ಪಕ್ಷ ಮತ್ತು ಸರ್ಕಾರದ ಹಿತದೃಷ್ಟಿಯಿಂದ, ಕೆಲವು ವಿಷಯಗಳಲ್ಲಿ ರಾಜಿ ಮಾಡಿಕೊಳ್ಳಬೇಕು" ಎಂದು ಜಾರಕಿಹೊಳಿ ಸುದ್ದಿಗಾರರಿಗೆ ತಿಳಿಸಿದರು. ಶಾಸಕರು ಕೂಡ ಸಚಿವ ಸಂಪುಟ ಪುನರ್ರಚನೆಗೆ ಒತ್ತಾಯಿಸುತ್ತಿರುವುದರಿಂದ ಶೀಘ್ರದಲ್ಲೇ ಆಗಬೇಕು ಎಂದು ಅವರು ಹೇಳಿದರು.
ಇದೇ ವೇಳೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೂಡ ಸಿದ್ದರಾಮಯ್ಯ ಅಸಹಾಯಕರಾಗಿರಲಿಲ್ಲ ಎಂದು ಪ್ರತಿಪಾದಿಸಿದರು. ಚುನಾವಣಾ ಫಲಿತಾಂಶಗಳು ಅವರ ಹುದ್ದೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಿದ್ದರಾಮಯ್ಯ ಬಣ ವಿಶ್ವಾಸ ವ್ಯಕ್ತ ಪಡಿಸಿದೆ. ಏಕೆಂದರೆ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಂದ ಬಂದ ಏಕೈಕ ಮುಖವಾಗಿರುವುದರಿಂದ ಹೈಕಮಾಂಡ್ ಅವರನ್ನು ತೆಗೆದುಹಾಕುವ ಅಪಾಯವಿಲ್ಲ.
ಆದರೆ ನಾಯಕತ್ವ ಬದಲಾವಣೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸಿದ್ದರಾಮಯ್ಯ ಅವರ ಎಂಎಲ್ಸಿ-ಮಗ ಡಾ. ಯತೀಂದ್ರ ಅವರ ಪುನರಾವರ್ತಿತ ಹಸ್ತಕ್ಷೇಪವು ಅವರ ತಂದೆಯ ವರ್ಚಸ್ಸಿಗೆ ಧಕ್ಕೆ ತರುತ್ತಿದೆ ಎಂದು ಕೆಲವರು ಭಾವಿಸಿದ್ದರು. ಅದಕ್ಕಾಗಿಯೇ ಕೆಲವು ಸಿದ್ದರಾಮಯ್ಯ ನಿಷ್ಠರು ಕೆಲ ಸಮಯದವರೆಗೆ ದೂರವಾಗಿದ್ದರು ಎಂದು ಹೇಳಲಾಗಿದೆ.
ಭಾನುವಾರ, ಶಿವಕುಮಾರ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಳಿಯ ಮುಕ್ತಿ ಮಂದಿರಕ್ಕೆ ಭೇಟಿ ನೀಡುತ್ತಿದ್ದರು. ಮುಖ್ಯಮಂತ್ರಿ ಹುದ್ದೆ ಪಡೆಯುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಈ ಸ್ಥಳದ ಶಕ್ತಿ ನನಗೆ ತಿಳಿದಿದೆ ಎಂದು ಅವರು ಹೇಳಿದರು. ಕಾಲವೇ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುತ್ತದೆ ಎಂದು ಹೇಳಿದರು.
Advertisement