

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಸಾಕಷ್ಟು ದಿನಗಳಿಂದ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ನಿಂತ ನೀರಲ್ಲ. ಅದು ಪರಿಶುದ್ಧವಾಗಿರಬೇಕೆಂದರೆ ಹರಿವಿಯುತ್ತಿರಬೇಕು. ಮೇ ತಿಂಗಳಲ್ಲಿ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ ಎಂದರು. ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿ ಕಾಣುತ್ತಿದ್ದಾರೆ. ಅಗಾಧ ಶಕ್ತಿ ಇರುವ ಅವರನ್ನು ಇಂತಹ ಸ್ಥಿತಿಯಲ್ಲಿ ನಾನು ಎಂದಿಗೂ ನೋಡಿರಲಿಲ್ಲ. ಇದೆಲ್ಲವನ್ನು ನೋಡುತ್ತಿದ್ದರೆ ಯಾರಾದರೂ ಮಾಟ-ಮಂತ್ರ ಮಾಡಿಸಿದ್ದಾರಾ ಎಂಬ ಆಲೋಚನೆ ಬರುತ್ತದೆ ಎಂದರು. ನಾನು ಮಾಟ ಮಂತ್ರವನ್ನು ನಂಬಲ್ಲ. ಆಗಂತ ಅದನ್ನು ಮಾಡಿಸುವುದಿಲ್ಲ ಅಂತಲ್ಲ. ನಮ್ಮ ಹಳೆ ಮನೆ ಮುಂದೆಯೂ ನಿಂಬೆಹಣ್ಣು, ದಾರ ಹಾಕಿ ಹೋಗಿದ್ದರು. ಕೇರಳದಲ್ಲಿ ಮಾಟ-ಮಂತ್ರ ಮಾಡಿಸುತ್ತಾರೆ ಎಂದು ಶಾಸಕ ರಾಜಣ್ಣ ಹೇಳಿದ್ದಾರೆ.
Advertisement