ಹೊಸ ಕ್ರಾಂತಿಗೆ ಮುನ್ನುಡಿ ಬರೆಯದಿದ್ದರೆ ಅಹಿಂದ ದೂರ: ನಮ್ಮ ಸರ್ಕಾರದಲ್ಲೇ ಕೆಲವರು ಭರವಸೆ ಈಡೇರಿಸಲು ಬಿಟ್ಟಿಲ್ಲ; ಸತೀಶ್ ಜಾರಕಿಹೊಳಿ

20 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶ ರಾಜಕೀಯ ಬದಲಾವಣೆಗೆ ಕಾರಣವಾಯಿತು. ಈ ನೆನಪು ಮುಂದಿಟ್ಟುಕೊಂಡು ಏನೆಲ್ಲ ಬದಲಾವಣೆಯಾಗಿದೆ, ಏನೇನು ಆಗಬೇಕು ಎನ್ನುವುದನ್ನು ಚಿಂತಿಸಬೇಕು ಎಂದರು.
Satish Jarakiholi
ಸತೀಶ್ ಜಾರಕಿಹೊಳಿ
Updated on

ಹುಬ್ಬಳ್ಳಿ: ಅಹಿಂದ ತಮ್ಮ ಪರವಾಗಿದೆ ಎಂದು ಕೆಲ ರಾಜಕಾರಣಿಗಳು ತಿಳಿದುಕೊಂಡಿದ್ದಾರೆ. ಆದರೆ, ಪರಿಸ್ಥಿತಿ ಅವರು ಅಂದುಕೊಂಡಂತಿಲ್ಲ. ಉಂಟಾಗಿರುವ ಸಮಸ್ಯೆಗೆ ಸೂಕ್ತ ಪರಿಹಾರ ನೀಡಿ ಗಟ್ಟಿಗೊಳಿಸಿ ಹೊಸ ಕ್ರಾಂತಿಗೆ ಮುನ್ನುಡಿ ಬರೆಯಬೇಕು. ಇಲ್ಲದಿದ್ದರೆ ಅಹಿಂದ ನಮ್ಮಿಂದ ದೂರವಾಗುತ್ತದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಭಾನುವಾರ ನಗರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಅಹಿಂದ ಹೋರಾಟ ಸಾಧನೆ, ಸಂಕಲ್ಪ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಈ ಚಳವಳಿ ನಿರಂತರವಾಗಿ ಕ್ರಿಯಾಶೀಲವಾಗಿರಬೇಕು. 20 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶ ರಾಜಕೀಯ ಬದಲಾವಣೆಗೆ ಕಾರಣವಾಯಿತು. ಈ ನೆನಪು ಮುಂದಿಟ್ಟುಕೊಂಡು ಏನೆಲ್ಲ ಬದಲಾವಣೆಯಾಗಿದೆ, ಏನೇನು ಆಗಬೇಕು ಎನ್ನುವುದನ್ನು ಚಿಂತಿಸಬೇಕು ಎಂದರು.

ಅಹಿಂದ ಸಂಘಟನೆಯನ್ನು ರಾಜಕೀಯ ಲಾಭಕ್ಕಾಗಿ ಮಾಡುತ್ತಿಲ್ಲ, ಜನ ಜಾಗೃತಿಗಾಗಿ ಮಾಡಲಾಗುತ್ತಿದೆ. ಅಹಿಂದ ವರ್ಗವು ಸರಕಾರ ಮತ್ತು ಜನರ ಮಧ್ಯೆ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಭವಿಷ್ಯದ ದಿನಮಾನಗಳಲ್ಲಿ ಏನೇನು ಆಗಬೇಕು ಎನ್ನುವುದನ್ನು ಚಿಂತಿಸಬೇಕು. ಇದು ನಾನು ಮುಖ್ಯಮಂತ್ರಿಯಾಗಬೇಕು, ಅಧಿಕಾರಿಯಾಗಬೇಕು ಎನ್ನುವ ರಾಜಕೀಯ ಕಾರ್ಯಾಗಾರವಲ್ಲ. ನಮ್ಮ ನ್ಯೂನತೆ, ತಪ್ಪುಗಳನ್ನು ಸರಿಪಡಿಸಿಕೊಂಡು ಹೋಗುವುದಕ್ಕಾಗಿ ಎಲ್ಲರ ಸಲಹೆ ಸೂಚನೆಗಾಗಿ ಈ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

Satish Jarakiholi
ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ ಸಿಕ್ಕಿದ್ದು, ಇದು ಐತಿಹಾಸಿಕ ನಿರ್ಧಾರ: ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದ್ದರೂ ಅಹಿಂದ ವರ್ಗಕ್ಕೆ ಏನೂ ಮಾಡಿಲ್ಲ ಎನ್ನುವ ಟೀಕೆಗಳು ಕೇಳಿ ಬರುತ್ತಿವೆ. ಇಂತಹ ಪ್ರಶ್ನೆಗಳಿಗೆ ಉತ್ತರಿಸಲು ನಾವು ಸನ್ನದ್ಧರಾಗಬೇಕಿದೆ. ನಮ್ಮ ಸರ್ಕಾರದಲ್ಲೇ ಕೆಲವರು ಭರವಸೆ ಈಡೇರಿಸಲು ಬಿಟ್ಟಿಲ್ಲ. ಈ ಅವಧಿಯಲ್ಲಿ ಸಾಕಷ್ಟು ಕಲಿತಿದ್ದೇವೆ. ಹೋರಾಟದ ಸ್ವರೂಪ ಬದಲಿಸಿಕೊಳ್ಳಬೇಕಿದೆ. ರಾಜಕೀಯ, ಸಾಮಾಜಿಕ ನ್ಯಾಯದ ಬಗ್ಗೆ ತಿಳಿದುಕೊಳ್ಳಬೇಕು. ಸಾಕಷ್ಟು ಸಭೆ, ಸಮಾವೇಶ ನಡೆಸಿದರೂ ಬದಲಾವಣೆ ಸಾಧ್ಯವಾಗಿಲ್ಲ ಎಂದು ಜಾರಕಿಹೊಳಿ ವಿಷಾದ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com