ಕುಮಾರಸ್ವಾಮಿ - ಅಮಿತ್ ಶಾ ಭೇಟಿ ಮಾಡಲು ನಮ್ಮ ನಾಯಕರು ಹೋಗಿಲ್ಲ: ಪಾರ್ಟಿ ಕಚೇರಿಯಲ್ಲಿ ಕಸ ಹೊಡೆಯುವುದಕ್ಕೂ ರೆಡಿ; ಶಿವರಾಜ್ ತಂಗಡಗಿ

ಪಕ್ಷ ಹೇಳಿದರೆ ಸಚಿವ ಸ್ಥಾನ ತ್ಯಾಗ ಮಾಡಿ ಕಾಂಗ್ರೆಸ್ ಪಾರ್ಟಿ ಕಚೇರಿಯಲ್ಲಿ ಕಸ ಗುಡಿಸೋದಕ್ಕೂ ರೆಡಿ ಇದ್ದೇನೆ, ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೇನೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.
Shivaraj S Thangadagi
ಶಿವರಾಜ್ ಎಸ್ ತಂಗಡಗಿ
Updated on

ಕೊಪ್ಪಳ: ಜನರ ಆಶೀರ್ವಾದಿಂದ ಸಚಿವ ಸಂಪುಟ ಸರ್ಜರಿ ಬಳಿಕವೂ ಸಚಿವನಾಗಿರುತ್ತೇನೆ ಎಂಬ ಭರವಸೆ ನನಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದರು.

ಕೊಪ್ಪಳದಲ್ಲಿನ ಕಾರ್ಯಕ್ರಮದ ಬಳಿಕ ಸುದ್ದಿಗಾರರು, ಸಚಿವ ಸಂಪುಟ ಸರ್ಜರಿ ಬಳಿಕ ನಿಮ್ಮ ಸ್ಥಾನ-ಮಾನದ ಕತೆ ಏನು"? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸಂಪುಟದ ಸರ್ಜರಿ ಅವಶ್ಯಕತೆ ಇದೆ. ಏಳೆಂಟು ವರ್ಷಗಳಿಂದ ಶಾಸಕರಾಗಿರುವವರಿಗೆ ಸಚಿವರಾಗುವ ಆಸೆ ಇದ್ದೇ ಇದೆ. ಹೀಗಾಗಿ ಹೈಕಮಾಂಡ್ ಭೇಟಿಗೆ ಹೋಗುವುದು ಸಹಜ. ಜನರ ಆಶೀರ್ವಾದ, ಕನಕ ಚಲಪತಿಯ ಕೃಪೆಯಿಂದ ಮುಂದೆ ಸಹ ನಾನು ಸಚಿವ ಸ್ಥಾನದಲ್ಲಿ ಮುಂದುವರೆಯತ್ತೇನೆ" ಎಂದರು.

ಪಕ್ಷ ಹೇಳಿದರೆ ಸಚಿವ ಸ್ಥಾನ ತ್ಯಾಗ ಮಾಡಿ ಕಾಂಗ್ರೆಸ್ ಪಾರ್ಟಿ ಕಚೇರಿಯಲ್ಲಿ ಕಸ ಗುಡಿಸೋದಕ್ಕೂ ರೆಡಿ ಇದ್ದೇನೆ, ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೇನೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.

ವರಿಷ್ಠರು ಹೈಕಮಾಂಡ್ ಭೇಟಿ ಮಾಡುವುದರಲ್ಲಿ ತಪ್ಪೇನಿದೇ?. ಕೇಂದ್ರದ ಎಚ್.ಡಿ. ಕುಮಾರಸ್ವಾಮಿ ಅಥವಾ ಅಮಿತ್ ಶಾ ಅವರನ್ನು ಭೇಟಿ ಮಾಡಲು ನಮ್ಮ ಪಕ್ಷದವರು ತೆರಳಿಲ್ಲ. ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

Shivaraj S Thangadagi
'ಮೋದಿಗೆ ವಿರೋಧ ಪಕ್ಷವಿಲ್ಲದ ಭಾರತ ಬೇಕು, ಹೆಂಡತಿ ಇಲ್ಲದ ಜೀವನ ಬೇಕು, ಬುದ್ಧಿ ಇಲ್ಲದ ಭಕ್ತರು ಬೇಕು...'!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com