

ಗದಗ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಗದಗ ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ ಪಾಟೀಲರಿಗೆ ಸಚಿವ ಸ್ಥಾನ ಕೊಡದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಇಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ ಅವರನ್ನು ಭೇಟಿಯಾಗಿ ಸಾಮೂಹಿಕವಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.
ಮೂರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ನಾಡಿನ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ಎಚ್ ಕೆ ಪಾಟೀಲ್ ಅವರ ಅನುಭವವನ್ನು ಪರಿಗಣಿಸಿಲ್ಲ ಎಂದು ಆರೋಪಿಸಿ ಐವರು ನಾಮನಿರ್ದೇಶಿತ ಸದಸ್ಯರು ಹಾಗೂ ನಗರಸಭೆಯ 16 ಚುನಾಯಿತ ಕಾಂಗ್ರೆಸ್ ಸದಸ್ಯರು ಸೇರಿ ಒಟ್ಟು 21 ಜನ ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೆ ಸತತವಾಗಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ 'ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ'ಕ್ಕೆ ಬೇಡಿಕೆ ಇಡುವ ಮೂಲಕ ತಮ್ಮ ಪ್ರತಿಭಟನೆ ದಾಖಲಿಸಿದರು.