ಬಿಡದಿ ಟೌನ್‌ಶಿಪ್ ಕುರಿತು ಚರ್ಚೆ ಆರಂಭಿಸಲು ಬಿಜೆಪಿ-ಜೆಡಿಎಸ್ ನಿರ್ಧಾರ: ರೈತರ ಹಿತಕ್ಕಾಗಿ ವಿಧಾನಸಭೆಯಲ್ಲಿ ಒಗ್ಗಟ್ಟಿನಿಂದ ಹೋರಾಟ: H D ಕುಮಾರಸ್ವಾಮಿ-Video

ಜುಲೈ ತಿಂಗಳಲ್ಲಿಯೇ ಬೆಂಗಳೂರಿನಲ್ಲಿ ಪ್ರಸ್ತಾಪಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿದ್ದರು.
Breakfast meeting of BJP-JDS leaders
ಬಿಜೆಪಿ-ಜೆಡಿಎಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್
Updated on

ಬೆಂಗಳೂರು: ರಾಜ್ಯ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಕರ್ನಾಟಕದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಶನಿವಾರ ಸಭೆ ನಡೆಸಿದರು. ಬಿಡದಿಯಲ್ಲಿ ಕಾಂಗ್ರೆಸ್ ಸರ್ಕಾರ ಪ್ರಸ್ತಾಪಿಸಿರುವ ಟೌನ್‌ಶಿಪ್ ಯೋಜನೆಗೆ ರೈತರಿಂದ ನಿರಂತರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಕೃಷಿ ಭೂಮಿ ಸ್ವಾಧೀನದಿಂದ ತಮ್ಮ ಜೀವನೋಪಾಯದ ಮೇಲೆ ಪರಿಣಾಮ ಬೀರುವ ಬಗ್ಗೆ ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಜುಲೈ ತಿಂಗಳಲ್ಲಿಯೇ ಬೆಂಗಳೂರಿನಲ್ಲಿ ಪ್ರಸ್ತಾಪಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿದ್ದರು.

ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಟೌನ್‌ಶಿಪ್ ಯೋಜನೆಗೆ ಶೇ.80ರಷ್ಟು ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮ್ಮ ಭೂಮಿಯನ್ನು ಬಿಟ್ಟುಕೊಡಲು ಸಿದ್ಧರಿಲ್ಲ ಎಂದು ಹೇಳಿದ್ದರು. ಬಿಡದಿ ಸಮೀಪ ಪ್ರಸ್ತಾಪಿಸಲಾಗಿರುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಯೋಜನೆಗಾಗಿ ಸುಮಾರು 500 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ ಬಳಿಕ ವಿಜಯೇಂದ್ರ ಈ ಹೇಳಿಕೆ ನೀಡಿದ್ದರು.

ರೈತರು ತಮ್ಮ ಭೂಮಿಯನ್ನು ಬಿಟ್ಟುಕೊಡುವಂತೆ ಒತ್ತಡ ಹೇರಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರು ಒತ್ತಾಯಿಸಿದ್ದರು. ರೈತರಿಗೆ ಭೂಮಿ ಬಿಟ್ಟುಕೊಡುವಂತೆ ಗೂಂಡಾಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ ಎಂದೂ ಅವರು ಆರೋಪಿಸಿದ್ದರು.

ಈ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಯೋಜನೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಹೆಚ್.ಡಿ. ಕುಮಾರಸ್ವಾಮಿ ಹೊರಡಿಸಿದ್ದರು, ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅದನ್ನು ಮುಂದುವರಿಸಿದ್ದರು.

ಬಿಡದಿಯ ರೈತರು ಒಳ್ಳೆಯ ಜನ. ಅವರನ್ನು ತಪ್ಪುದಾರಿಗೆ ಎಳೆಯಲಾಗುತ್ತಿದೆ. ಕುಮಾರಸ್ವಾಮಿ ಈ ಯೋಜನೆಯ ಪಿತಾಮಹರಲ್ಲವೇ ಅವರೇ ಅದನ್ನು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

Breakfast meeting of BJP-JDS leaders
ಬಿಡದಿ ಟೌನ್‌ಶಿಪ್ ಯೋಜನೆ 'ಅಸಂವಿಧಾನಿಕ'- GBDA 'ಕಾನೂನುಬಾಹಿರ': ನ್ಯಾಯಮೂರ್ತಿ ಗೋಪಾಲ ಗೌಡ ಸಮಿತಿ

ನಾವು ಯೋಜನೆಯನ್ನು ಮುಂದುವರಿಸುತ್ತಿದ್ದೇವಷ್ಟೇ. ಹೊಸದಾಗಿ ಏನನ್ನೂ ಮಾಡುತ್ತಿಲ್ಲ. ಬಿಡದಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಂಡವರು ಯಾರು? ಈಗಿರುವ 9,000 ಎಕರೆಯಲ್ಲಿ ಮಾಜಿ ಬಿಜೆಪಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ 1,000 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರಲಿಲ್ಲವೇ ಎಂದು ಪ್ರಶ್ನಿಸಿದರು.

ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಯೋಜನೆಯು ರೈತರ ತೀವ್ರ ವಿರೋಧಕ್ಕೆ ಕಾರಣವಾಗಿದ್ದು, ಭೂಸ್ವಾಧೀನ ವಿಚಾರವಾಗಿ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದೆ.

ಬೆಂಗಳೂರಿನಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಬಿಡದಿಯಲ್ಲಿ ಭಾರತದ ಮೊದಲ ‘ಕೃತಕ ಬುದ್ಧಿಮತ್ತೆ (AI) ಚಾಲಿತ ನಗರ’ ನಿರ್ಮಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಸುಮಾರು 9,600 ಎಕರೆ ಪ್ರದೇಶವನ್ನು ಒಳಗೊಂಡಿರುವ ಯೋಜನೆಗೆ ಫಲವತ್ತಾದ ಕೃಷಿ ಭೂಮಿಯ ದೊಡ್ಡ ಪ್ರಮಾಣದ ಸ್ವಾಧೀನ ಅಗತ್ಯವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com