ವಿಧಾನಸಭೆ ಕಲಾಪದ ಮಾಧ್ಯಮ ಪ್ರಸಾರದಲ್ಲಿ ‘ಪಕ್ಷಪಾತ’ ಆರೋಪ; ದೂರು ಸಲ್ಲಿಕೆ, ಆರ್ ಅಶೋಕ್ ಹಕ್ಕುಚ್ಯುತಿ ಮಂಡನೆ ಎಚ್ಚರಿಕೆ

ಮುಂಗಾರು ಅಧಿವೇಶನ ಆರಂಭವಾದ ಬಳಿಕ ಪ್ರತಿಪಕ್ಷದ ಚಟುವಟಿಕೆಗಳು ಮುದ್ರಣ ಮತ್ತು ದೂರದರ್ಶನ ಮಾಧ್ಯಮಗಳಿಗೆ ಸಮರ್ಪಕವಾಗಿ ಬಿಡುಗಡೆಗೊಳ್ಳುತ್ತಿಲ್ಲ. ಆದರೆ ಮುಖ್ಯಮಂತ್ರಿ, ಸಚಿವರು ಹಾಗೂ ಆಡಳಿತಾರೂಢ ಪಕ್ಷದ ಶಾಸಕರ ಕಾರ್ಯಕ್ರಮಗಳು ಮತ್ತು ಹೇಳಿಕೆಗಳು ನಿರಂತರವಾಗಿ ಪ್ರಸಾರವಾಗುತ್ತಿವೆ ಎಂದು ಅವರು ದೂರಿದ್ದಾರೆ.
 R Ashok complaint
ಆರ್ ಅಶೋಕ್ ದೂರು ಸಲ್ಲಿಕೆ
Updated on

ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ವಿಧಾನಸಭಾಧ್ಯಕ್ಷರಿಗೆ ದೂರು ಸಲ್ಲಿಸಿ, ಪ್ರತಿಪಕ್ಷ ಸದಸ್ಯರ ಹೇಳಿಕೆಗಳು, ಛಾಯಾಚಿತ್ರಗಳು ಹಾಗೂ ವಿಡಿಯೊ ತುಣುಕುಗಳನ್ನು ಅಧಿಕೃತ ಮಾಧ್ಯಮ ಪ್ರಸಾರದಿಂದ ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಆಗಸ್ಟ್ 13ರಂದು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಪ್ರತಿಪಕ್ಷದ ಚಟುವಟಿಕೆಗಳು ಮುದ್ರಣ ಮತ್ತು ದೂರದರ್ಶನ ಮಾಧ್ಯಮಗಳಿಗೆ ಸಮರ್ಪಕವಾಗಿ ಬಿಡುಗಡೆಗೊಳ್ಳುತ್ತಿಲ್ಲ. ಆದರೆ ಮುಖ್ಯಮಂತ್ರಿ, ಸಚಿವರು ಹಾಗೂ ಆಡಳಿತಾರೂಢ ಪಕ್ಷದ ಶಾಸಕರ ಕಾರ್ಯಕ್ರಮಗಳು ಮತ್ತು ಹೇಳಿಕೆಗಳು ನಿರಂತರವಾಗಿ ಪ್ರಸಾರವಾಗುತ್ತಿವೆ ಎಂದು ಅವರು ದೂರಿದ್ದಾರೆ.

 R Ashok complaint
ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ಪ್ರತಿಪಕ್ಷಕ್ಕೂ ಸಮಾನ ಹಾಗೂ ನ್ಯಾಯಸಮ್ಮತ ಮಾಧ್ಯಮ ಪ್ರಸಾರ ದೊರೆಯುವಂತೆ ವಿಧಾನಸಭಾಧ್ಯಕ್ಷರು ಮಧ್ಯಪ್ರವೇಶಿಸಬೇಕು ಎಂದು ಅಶೋಕ್ ಮನವಿ ಮಾಡಿದ್ದಾರೆ.

ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ, ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com