ಮತ್ತೆ ಭುಗಿಲೆದ್ದ ನಾಯಕತ್ವ ಬದಲಾವಣೆ ಚರ್ಚೆ: ಯತೀಂದ್ರ ಹೇಳಿದ ಮೇಲೆ ಮುಗೀತು- ಡಿಕೆಶಿ ಟಾಂಗ್

ಬಳಿಕ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಯತೀಂದ್ರ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು ಎಂದು ತಿರುಗೇಟು ನೀಡಿದರು.
Dr Yathindra Siddaramaiah and DCM D K Shivakumar
ಡಾ ಯತೀಂದ್ರ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್
Updated on

ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬಳಿಕ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಯತೀಂದ್ರ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು ಎಂದು ತಿರುಗೇಟು ನೀಡಿದರು.

ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಯತೀಂದ್ರರ ಈ‌ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸುತ್ತೇನೆ. ಅವರೇ ನಮ್ಮ ಹೈಕಮಾಂಡ್ ಅಂತ ಒಪ್ಪಿಕೊಳ್ಳೋಣ. ಯತೀಂದ್ರ ಅಥವಾ ಶಿವಗಂಗಾ ಹೇಳಿಕೆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಈ ಬಗ್ಗೆ ಏನು ಪ್ರತಿಕ್ರಿಯಿಸಬೇಕೋ ಅದನ್ನು ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದರು.

Dr Yathindra Siddaramaiah and DCM D K Shivakumar
'ಹೈಕಮಾಂಡ್ ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದ್ದಾರೆ, 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ': ಡಾ ಯತೀಂದ್ರ

ಇನ್ನು ಪುತ್ತೂರು ಕಾಂಗ್ರೆಸ್ ಕಚೇರಿ ಶಿಲಾನ್ಯಾಸದಲ್ಲಿ ಮುಸ್ಲಿಂ ಮುಖಂಡರ ಹೆಸರು ಕೈಬಿಟ್ಟ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಕಾಂಗ್ರೆಸ್ ಜಾತಿ ಮೇಲಲ್ಲ ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲಾ ಜಾತಿ, ಧರ್ಮಗಳೂ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com