'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ಹಿರಿಯ ದಲಿತ ನಾಯಕ ದಾಮೋದರಂ ಸಂಜೀವಯ್ಯ ಅವರು ಎಐಸಿಸಿ ಅಧ್ಯಕ್ಷರಾಗಿ ಉಳಿದುಕೊಂಡು ಆಂಧ್ರಪ್ರದೇಶದ ಎರಡನೇ ಮುಖ್ಯಮಂತ್ರಿಯಾದರು (1969-62ರ ನಡುವೆ). ಈಗ, ಖರ್ಗೆ ಅವರಿಗೆ ಆ ಸಾಧನೆ ಮಾಡಲು ಅವಕಾಶವಿದೆ
Mallikarjuna Kharge
ಮಲ್ಲಿಕಾರ್ಜುನ ಖರ್ಗೆ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಲು ಡಿಕೆ ಶಿವಕುಮಾರ್ ಅವರೊಬ್ಬರೇ ಅರ್ಹರಾದ ಏಕೈಕ ನಾಯಕ ಎಂದು ಬಿಂಬಿಸಲು ಡಿಸಿಎಂ ಬೆಂಬಲಿಗರು ಎಲ್ಲಾ ರೀತಿಯ ನಡೆಸುತ್ತಿರುವುದ ಹಿರಿಯ ದಲಿತ ನಾಯಕರ ಒಂದು ವರ್ಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸಮಾಧಾನಗೊಂಡಿದೆ ಎಂದು ವರದಿಯಾಗಿದೆ.

ಗೃಹ ಸಚಿವ ಡಾ. ಜಿ ಪರಮೇಶ್ವರ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಖರ್ಗೆ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಒತ್ತಾಯಿಸಿದರು. ಆದರೆ ಈ ನಿರ್ಧಾರವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಎಲ್‌ಒಪಿ ರಾಹುಲ್ ಗಾಂಧಿ ತೆಗೆದುಕೊಳ್ಳಬೇಕಾಗಿದೆ.

ಖರ್ಗೆ ಅವರ ರಾಜ್ಯಸಭೆಯ ಅವಧಿ ಜೂನ್‌ನಲ್ಲಿ ಕೊನೆಗೊಳ್ಳುತ್ತದೆ ಮತ್ತು ಪಕ್ಷವು ಅವರನ್ನು ಮತ್ತೆ ನಾಮನಿರ್ದೇಶನ ಮಾಡಿದರೆ ಅವರು ರಾಷ್ಟ್ರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ಆದರೆ ಅವರು ಎಐಸಿಸಿ ಅಧ್ಯಕ್ಷರಾಗಿ ಉಳಿಯುತ್ತಾರೆಯೇ ಎಂದು ಕಾದು ನೋಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಹಿರಿಯ ದಲಿತ ನಾಯಕ ದಾಮೋದರಂ ಸಂಜೀವಯ್ಯ ಅವರು ಎಐಸಿಸಿ ಅಧ್ಯಕ್ಷರಾಗಿ ಉಳಿದುಕೊಂಡು ಆಂಧ್ರಪ್ರದೇಶದ ಎರಡನೇ ಮುಖ್ಯಮಂತ್ರಿಯಾದರು (1969-62ರ ನಡುವೆ). ಈಗ, ಖರ್ಗೆ ಅವರಿಗೆ ಆ ಸಾಧನೆ ಮಾಡಲು ಅವಕಾಶವಿದೆ ಎಂದು ನಾಯಕರು ಖರ್ಗೆ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Mallikarjuna Kharge
ನವದೆಹಲಿ: 'ದಲಿತ ಸಿಎಂ' ಗಾಗಿ ಒತ್ತಾಯ, ಕಾಂಗ್ರೆಸ್ ಪ್ರದಾನ ಕಚೇರಿ ಬಳಿ ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ

"ಖರ್ಗೆ ಅವರನ್ನು ಮುಖ್ಯಮಂತ್ರಿಯಾಗಿ ಸ್ವಾಗತಿಸುತ್ತೇವೆ, ಇಲ್ಲದಿದ್ದರೆ ಅವರು ಇತಿಹಾಸ ರಚಿಸಲು ದಲಿತ ವ್ಯಕ್ತಿಯನ್ನು ಉನ್ನತ ಹುದ್ದೆಗೆ ಪರಿಗಣಿಸಬೇಕು. ಇಲ್ಲದಿದ್ದರೆ, ಕಾಂಗ್ರೆಸ್‌ನ ಆಡಳಿತದ ಚುಕ್ಕಾಣಿ ಹಿಡಿದಿದ್ದರೂ ಅವಕಾಶ ನೀಡಿದ್ದಕ್ಕಾಗಿ ಇತಿಹಾಸವು ಅವರನ್ನು ಶಪಿಸುತ್ತದೆ ಎಂದು ಹಿರಿಯ ನಾಯಕರೊಬ್ಬರು ಟಿಎನ್‌ಐಇಗೆ ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಸೇರಿದಂತೆ ದಲಿತ ಶಾಸಕರು, ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷಗಳ ಕಾಲ ಪಕ್ಷದ ಸಂಘಟನೆಗೆ ಕೊಡುಗೆ ನೀಡಿದ್ದರಿಂದ ಪರಮೇಶ್ವರ ಅವರೇ ಮುಖ್ಯಮಂತ್ರಿಯಾಗಬೇಕೆಂದು ಹೇಳಿದರು. ಸ್ವತಃ ದಲಿತ ನಾಯಕರಾದ ಪರಮೇಶ್ವರ ಅವರು ಮುಖ್ಯಮಂತ್ರಿಯಾಗುವ ಅವರ ಸಾಮರ್ಥ್ಯವನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com