ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪರಿಷತ್ ಚುನಾವಣೆ: ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ ಇಂಗಿತ, ಕೋರ್ ಕಮಿಟಿಯಲ್ಲಿ ಚರ್ಚೆ

ಸೋಮವಾರ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ, ಮುಂಬರುವ ಚುನಾವಣೆಗಳಿಗೂ ಮೈತ್ರಿ ಮುಂದುವರಿಸುವ ಬಗ್ಗೆ ಚರ್ಚಿಸಲಾಯಿತು. ಕೆಲವು ಬಿಜೆಪಿ ನಾಯಕರು ಮೂರು ಸ್ಥಾನಗಳನ್ನು ಉಳಿಸಿಕೊಳ್ಳಲು ಸೂಚಿಸಿದರು.
BJP
ಬಿಜೆಪಿ
Updated on

ಬೆಂಗಳೂರು: ಈ ವರ್ಷ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಒಟ್ಟು ನಾಲ್ಕು ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಉಳಿಸಿಕೊಳ್ಳಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿದೆ. ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧವಿವೆ.

ಸೋಮವಾರ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ, ಮುಂಬರುವ ಚುನಾವಣೆಗಳಿಗೂ ಮೈತ್ರಿ ಮುಂದುವರಿಸುವ ಬಗ್ಗೆ ಚರ್ಚಿಸಲಾಯಿತು. ಕೆಲವು ಬಿಜೆಪಿ ನಾಯಕರು ಮೂರು ಸ್ಥಾನಗಳನ್ನು ಉಳಿಸಿಕೊಳ್ಳಲು ಸೂಚಿಸಿದರು. ಬಿಜೆಪಿಯ ಮೂಲಗಳ ಪ್ರಕಾರ, ಕೆಲವು ನಾಯಕರು ಜಂಟಿಯಾಗಿ ಸ್ಪರ್ಧಿಸಿದರೆ ನಾಲ್ಕು ಸ್ಥಾನಗಳಲ್ಲಿ ಮೂರು (ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ತಲಾ ಎರಡು) ಗೆಲ್ಲುವುದು ಸುಲಭ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅದಾಗ್ಯೂ ಜೆಡಿಎಸ್, ಎರಡು ಸ್ಥಾನಗಳಿಗೆ ಬೇಡಿಕೆ ಇಡಲು ಯೋಜಿಸುತ್ತಿದೆ. ಅವು ಬೆಂಗಳೂರು ಶಿಕ್ಷಕರ ಮತ್ತು ಆಗ್ನೇಯ ಪದವೀಧರ ಪದವೀಧರ ಕ್ಷೇತ್ರಗಳು. ಇದರಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರಸ್ತುತ ಕಾಂಗ್ರೆಸ್‌ನ ಪುಟ್ಟಣ್ಣ ಮತ್ತು ಆಗ್ನೇಯ ಪದವೀಧರ ಕ್ಷೇತ್ರವನ್ನು ಬಿಜೆಪಿಯ ಚಿದಾನಂದಗೌಡ ಪ್ರತಿನಿಧಿಸುತ್ತಿದ್ದಾರೆ.

ಈ ಹಿಂದೆ, ನಾವು ಎರಡೂ ಕ್ಷೇತ್ರಗಳಿಂದ ಗೆದ್ದಿದ್ದೇವೆ. ಈಗ ನಮ್ಮಲ್ಲಿ ಅರ್ಹ ಅಭ್ಯರ್ಥಿಗಳಿದ್ದಾರೆ. ಈ ಎರಡು ಸ್ಥಾನಗಳನ್ನು ನಾವು ಕೇಳುತ್ತೇವೆ ಎಂದು ಜೆಡಿಎಸ್‌ನ ಹಿರಿಯ ನಾಯಕರೊಬ್ಬರು ಹೇಳಿದರು. 2020 ರಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಳು ನಡೆದವು.

ಎರಡು ಪದವೀಧರರ ಕ್ಷೇತ್ರಗಳಿಂದ ಎಸ್ ವಿ ಸಂಕನೂರು ಮತ್ತು ಚಿದಾನಂದ್ ಗೌಡ ಆಯ್ಕೆಯಾದರು. ಎರಡು ಶಿಕ್ಷಕರ ಕ್ಷೇತ್ರಗಳಿಂದ ಶಶಿಲ್ ನಮೋಶಿ ಮತ್ತು ಪುಟ್ಟಣ್ಣ ಆಯ್ಕೆಯಾದರು. ನಾಲ್ವರೂ ಬಿಜೆಪಿಯವರಾಗಿದ್ದರು. ಆದರೆ ಪುಟ್ಟಣ್ಣ ಕೇಸರಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದರು. ನಂತರ, ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಮರು ಆಯ್ಕೆಯಾದರು. ಇವರೆಲ್ಲರ ಅವಧಿಗಳು ನವೆಂಬರ್ 11 ರಂದು ಕೊನೆಗೊಳ್ಳುತ್ತವೆ.

BJP
ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ: ಮೂವರು ಲಿಂಗಾಯತರಿಗೆ ಮಣೆ; ರಾಜಣ್ಣ ಬೆಂಬಲಿಗ ಶಶಿ ಹುಲಿಕುಂಟೆಮಠಗೆ ಟಿಕೆಟ್ ಕೊಟ್ಟ ಡಿಕೆಶಿ!

ಅವಧಿ ಮುಗಿಯುವ ಒಂದು ತಿಂಗಳ ಮೊದಲು ಚುನಾವಣೆಗಳನ್ನು ನಡೆಸಬೇಕು. ಕಾಂಗ್ರೆಸ್ ಈಗಾಗಲೇ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಮರು ಸ್ಪರ್ಧೆ ಮಾಡಲಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದಿಂದ ಮೋಹನ್ ಲಿಂಬಿಕೈ, ಆಗ್ನೇಯ ಪದವೀಧರರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮಟ್ಟೂರ್.

ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು, ಅದು ತನ್ನ ಮೂರು ಸ್ಥಾನಗಳನ್ನು ಉಳಿಸಿಕೊಳ್ಳಬೇಕಾಗಿದ್ದು, ಇದು ಪ್ರಮುಖ ಸವಾಲಾಗಿದೆ. 2020 ರ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧಿಸಿತ್ತು. ಈ ಬಾರಿಯೂ ಅದೇ ಸೂತ್ರ ಮುಂದುವರಿಯುವ ಸಾಧ್ಯತೆಯಿದೆ. ಜೆಡಿಎಸ್ ನಿಂದ ಎ.ಪಿ. ರಂಗನಾಥ್ ಮತ್ತು ಮಾಜಿ ಎಂ.ಎಲ್.ಸಿ. ರಮೇಶ್ ಗೌಡ ಸ್ಪರ್ಧಿಸಲು ಆಕಾಂಕ್ಷಿಗಳಾಗಿದ್ದಾರೆ.

ಉಳಿದ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲವನ್ನು ಪಡೆಯಲು ಬಿಜೆಪಿ ಉದ್ದೇಶಿಸಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ, ದಾವಣಗೆರೆಯ ಸುರೇಶ್, ಪಕ್ಷದ ಕಾನೂನು ಕೋಶದ ಸಂಚಾಲಕ ವಸಂತ್ ಕುಮಾರ್ ಮತ್ತು ಚಿದಾನಂದಗೌಡ ಬದಲಿಗೆ ವೈ.ಎ. ನಾರಾಯಣಸ್ವಾಮಿ ಅವರ ಹೆಸರುಗಳು ಚರ್ಚೆಯಲ್ಲಿವೆ.

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ, ಹಾಲಿ ಎಂ.ಎಲ್.ಸಿ. ಸಂಕನೂರ್ ಜೊತೆಗೆ ಲಿಂಗರಾಜ್ ಪಾಟೀಲ್ ಮತ್ತು ಜಯತೀರ್ಥ ಕಟ್ಟಿ ಅವರ ಹೆಸರುಗಳನ್ನು ಪರಿಗಣಿಸಲಾಗುತ್ತಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ, ಹಾಲಿ ಎಂ.ಎಲ್.ಸಿ. ಶಶಿಲ್ ನಮೋಶಿ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ. ಕಳೆದ ಬಾರಿ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com