ವೈಫಲ್ಯಗಳ ಮರೆಮಾಚಲು ರಾಜ್ಯ ಸರ್ಕಾರದಿಂದ ಜಂಟಿ ಅಧಿವೇಶನ ದುರುಪಯೋಗ: ಹೆಚ್.ಡಿ ಕುಮಾರಸ್ವಾಮಿ

ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಸಚಿವರು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಈ ಘಟನೆ ನಡೆದಿದೆ.
HD Kumaraswamy
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Updated on

ಬೆಂಗಳೂರು: ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೇ ತಾವೇ ಸಿದ್ಧಪಡಿಸಿದ ಭಾಷಣವನ್ನು ಓದಿ ಸದನದಿಂದ ಹೊರನಡೆದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆಯನ್ನು ಸಮರ್ಥಿಸಿಕೊಂಡರು.

ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.

ಈ ಸರ್ಕಾರದ ಸಣ್ಣತನದ ನಡವಳಿಕೆಯಿಂದ ಇಂತಹ ಒಂದು ಪ್ರಕರಣ ರಾಜ್ಯದಲ್ಲಿ ಮೊದಲ ಬಾರಿಗೆ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

HD Kumaraswamy
ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಗೆಹ್ಲೋಟ್; Video

ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಸಚಿವರು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಈ ಘಟನೆ ನಡೆದಿದೆ. ಒಟ್ಟಾರೆ ಈ ಸರ್ಕಾರ ತನ್ನ ತಪ್ಪುಗಳನ್ನು ಮರೆಮಾಚಲು ಜಂಟಿ ಅಧಿವೇಶನ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com