ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಸಚಿವಾಕಾಂಕ್ಷಿಗಳ ದಂಡು: ತಮ್ಮ ಪರ ಬ್ಯಾಟಿಂಗ್ ಗೆ ಒತ್ತಾಯ

ಸಿದ್ದರಾಮಯ್ಯ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕೋರಿದರು. ಅವರು ಪ್ರದೀಪ್ ಅವರನ್ನು ನಿರುತ್ಸಾಹಗೊಳಿಸಬೇಡಿ ಎಂದು ಒತ್ತಾಯಿಸಿದರು
Ministerial aspirants call on Siddaramaiah at his residence
ಸಿದ್ದರಾಮಯ್ಯ ಮನೆಯಲ್ಲಿ ಕಾಂಗ್ರೆಸ್ ಶಾಸಕರು
Updated on

ಬೆಂಗಳೂರು: ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸವು ಪವರ್ ಸೆಂಟರ್ ಆಗಿ ಬದಲಾಗಿತ್ತು ಸಚಿವಕಾಂಕ್ಷಿಗಳು ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಸಿದ್ದರಮಯ್ಯ ಅವರನ್ನು ಭೇಟಿ ಮಾಡಿದರು.

ಎನ್ ಚಲುವರಾಯಸ್ವಾಮಿ, ಮಧು ಬಂಗಾರಪ್ಪ, ಸಂತೋಷ್ ಲಾಡ್, ಕೆ ಎಂ ಶಿವಲಿಂಗೇಗೌಡ, ಶ್ರೀನಿವಾಸ್ ಮಾನೆ, ಯಾಸಿರ್ ಅಹ್ಮದ್ ಖಾನ್ ಪಠಾಣ್ ಮತ್ತು ಕೆ ವೆಂಕಟೇಶ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಪ್ರದೀಪ್ ತಮ್ಮ ಕ್ಷೇತ್ರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಲವು ಜೆಡಿಎಸ್ ಕಾರ್ಯಕರ್ತರು ಅವರ ಕಡೆಗೆ ಚಪ್ಪಲಿ ಎಸೆದಾಗ ಏನಾಯಿತು ಎಂದು ವಿವರಿಸಿದರು.

ಸಿದ್ದರಾಮಯ್ಯ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕೋರಿದರು. ಅವರು ಪ್ರದೀಪ್ ಅವರನ್ನು ನಿರುತ್ಸಾಹಗೊಳಿಸಬೇಡಿ ಎಂದು ಒತ್ತಾಯಿಸಿದರು ಮತ್ತು ರಾಜಕೀಯ ಜೀವನದಲ್ಲಿ ಇಂತಹ ಘಟನೆಗಳು ಸಾಮಾನ್ಯ ಎಂದು ಹೇಳಿದರು.

Ministerial aspirants call on Siddaramaiah at his residence
ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!

ಪೊಲೀಸರ ಉಪಸ್ಥಿತಿಯ ಹೊರತಾಗಿಯೂ ಆಡಳಿತ ಪಕ್ಷದ ಶಾಸಕರೊಬ್ಬರು ಇಂತಹ ಘಟನೆಯನ್ನು ಎದುರಿಸಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು. ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ತಮಗೂ ಮಂತ್ರಿ ಸ್ಥಾನ ಕೊಡಿಸುವಂತೆ ಆಕಾಂಕ್ಷೆಗಳು ಹಲವಾರು ಶಾಸಕರು ಸಿದ್ದರಾಮಯ್ಯ ಅವರ ಬೆಂಬಲವನ್ನು ಕೋರುತ್ತಿದ್ದಾರೆ ಎಂದು ಹೇಳಲಾಗುತ್ತದೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಂಪುಟ ವಿಸ್ತರಣೆಗಾಗಿ ಕಾಯುತ್ತಿದೆ. 34 ಸದಸ್ಯರ ಸಂಪುಟದಲ್ಲಿ 20 ಸ್ಥಾನಗಳು ಖಾಲಿ ಇವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com