ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದ ಬುಡ ಅಲುಗಾಡಬಹುದು: ಮೂರನೇ CM ಬರಲು ಸಾಧ್ಯವಿಲ್ಲ; ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.
Satish Jarakiholi
ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಮುಂದಿನ ಸುತ್ತಿನ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ ಸರ್ಕಾರ "ಎರಡು-ಮೂರು ದಿನಗಳವರೆಗೆ ಅಲುಗಾಡುತ್ತದೆ" ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸರ್ಕಾರದ ಬುಡ ಅಲ್ಲಾಡಲಿದೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದ ಅವರು , ಆಗಸ್ಟ್‌ನಲ್ಲಿ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಸ್ವಲ್ಪ ಮಟ್ಟಿಗೆ ಅಲುಗಾಡುತ್ತೆ ಆದ್ರೆ ಏನು ಆಗಲ್ಲ ಎಂದಿದ್ದಾರೆ. ಹೆಚ್ಚೆಂದ್ರೆ ಎರಡು ಮೂರು ದಿನಗಳು ಅಲ್ಲಾಡಬಹುದು, ಆಮೇಲೆ ಎಲ್ಲವೂ ಸರಿ ಹೋಗುತ್ತೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.

ಸಂಪುಟ ವಿಸ್ತರಣೆ ವಿಳಂಬ ವಿಚಾರದಲ್ಲಿ ನಾವು ಏನೂ ಮಾಡಲು ಆಗುವುದಿಲ್ಲ. ವಿಸ್ತರಣೆ ಮಾಡುವವರೆಗೆ ಕಾಯಲೇಬೇಕು. ಈಗಾಗಲೇ ಒಂದು ತಿಂಗಳು ತಡವಾಗಿದೆ ಎಂದರು.

Satish Jarakiholi
ಸಚಿವ ಸಂಪುಟ ವಿಸ್ತರಣೆ ನಮ್ಮ ಕೈಯಲ್ಲಿಲ್ಲ: ಸಚಿವ ಸತೀಶ್ ಜಾರಕಿಹೊಳಿ; Video

ಉಳಿದ 20 ಸ್ಥಾನಗಳನ್ನು ಭರ್ತಿ ಮಾಡುವಾಗ ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಪರಿಗಣಿಸಲು ಪಕ್ಷವು ಉತ್ಸುಕವಾಗಿದೆ ಎಂದು ಹೇಳಲಾಗುತ್ತದೆ (ಕರ್ನಾಟಕವು 224 ಸದಸ್ಯರನ್ನು ಹೊಂದಿರುವ ವಿಧಾನಸಭೆಯಲ್ಲಿ ಗರಿಷ್ಠ 34 ಮಂತ್ರಿಗಳನ್ನು ಹೊಂದಬಹುದು.

ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚರ್ಚೆ ಮಾಡುವ ಅಗತ್ಯ ಇಲ್ಲ. ಅಲ್ಲಿ ನಾವು ಯಾರನ್ನೂ ಗುರಿ ಮಾಡುತ್ತಿಲ್ಲ. ಕೆಲ ಜವಾಬ್ದಾರಿಗಳ ಹಿನ್ನೆಲೆಯಲ್ಲಿ ತಾವು ಆ ಕ್ಷೇತ್ರಕ್ಕೆ ಭೇಟಿ ಮಾಡಿದ್ದು ನಿಜ. ಚುನಾವಣೆ ಬಂದಾಗ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ವಿವರಣೆ ನೀಡಿದರು.

X
Kannada Prabha
www.kannadaprabha.com