

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಧನ್ಯವಾದ ಅರ್ಪಿಸಿದ್ದಾರೆ. ಆದರೆ ಈ ವಿಷಯದ ಬಗ್ಗೆ ಇಷ್ಟು ದಿನ ಮೌನವಾಗಿದ್ದಕ್ಕಾಗಿ ಪ್ರಧಾನಿಯನ್ನು ಟೀಕಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕಠಿಣ ಕ್ರಮಗಳನ್ನು ಹೊಂದಿರುವ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಪ್ರಧಾನಿ ಮೋದಿ ಅವರು ಗುರುವಾರ ರಾತ್ರಿ ವಿಡಿಯೋ ಸಂದೇಶದ ಮೂಲಕ ಘೋಷಿಸಿದ್ದಾರೆ.
ಮೋದಿ ವಿಡಿಯೋ ಸಂದೇಶಕ್ಕೆ ಪ್ರತಿಕ್ರಿಯಿಸಿದ ಸಿಎಂ ಶಿವಕುಮಾರ್, "ಕನಿಷ್ಠ ಪಕ್ಷ(ಪ್ರಧಾನಿ) ಈಗಲಾದ್ರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಸುಮಾರು ಹದಿನೈದು ದಿನಗಳು ಅಥವಾ ಒಂದು ತಿಂಗಳ ನಂತರ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದು ಮುಖ್ಯ. ನಾವೆಲ್ಲರೂ ನಮ್ಮ ಮಕ್ಕಳು ಮತ್ತು ಯುವಕರ ಭವಿಷ್ಯಕ್ಕಾಗಿ ಕೆಲಸ ಮಾಡುತ್ತೇವೆ. ಕನಿಷ್ಠ ಈಗ ಅವರು ಇಡೀ ದೇಶದ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರಿಗೆ ಧನ್ಯವಾದಗಳು" ಎಂದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪ್ರಧಾನಿಯವರ ಈ ಹೇಳಿಕೆ ಹೊರಬಿದ್ದಿದೆ.