ಸಿಎಂ ಡಿ ಕೆ ಶಿವಕುಮಾರ್ ನನಗೆ ರಾಜೀನಾಮೆ ನೀಡುವಂತೆ ಹೇಳಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ

ನನಗೆ ಅಧಿಕಾರದ ಆಸೆಯಿಲ್ಲ. ಇದುವರೆಗೆ ವಿಧಾನ ಪರಿಷತ್‌ನ ಎಲ್ಲ ಸಭಾಪತಿಗಳೂ ತಮ್ಮ ಪೂರ್ಣ ಅವಧಿ ಮುಗಿಸಿದ್ದಾರೆ. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ತರಲಾದ ಉದಾಹರಣೆಯೂ ಇಲ್ಲ. ನನ್ನ ವಿರುದ್ಧ ದೂರು ಬಂದ ಕ್ಷಣವೇ ನಾನು ಆ ಹುದ್ದೆಯಲ್ಲಿ ಇರುವುದಿಲ್ಲ ಎಂದು ಹೊರಟ್ಟಿ ಹೇಳಿದರು.
Basavaraja Hoatti
ಬಸವರಾಜ ಹೊರಟ್ಟಿ
Updated on

ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡುವಂತೆ ಕೇಳಬಹುದು ಅಥವಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ತರಬಹುದು ಎಂಬ ಊಹಾಪೋಹಗಳ ನಡುವೆಯೇ, ಅಂತಹ ಪ್ರಯತ್ನ ನಡೆದರೆ ತಾವು ಆ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನನಗೆ ಅಧಿಕಾರದ ಆಸೆಯಿಲ್ಲ. ನನ್ನ ವಿರುದ್ಧ ಯಾವುದೇ ದೂರು ಇಲ್ಲ. ಇದುವರೆಗೆ ವಿಧಾನ ಪರಿಷತ್‌ನ ಎಲ್ಲ ಸಭಾಪತಿಗಳೂ ತಮ್ಮ ಪೂರ್ಣ ಅವಧಿ ಮುಗಿಸಿದ್ದಾರೆ. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ತರಲಾದ ಉದಾಹರಣೆಯೂ ಇಲ್ಲ. ನನ್ನ ವಿರುದ್ಧ ದೂರು ಬಂದ ಕ್ಷಣವೇ ನಾನು ಆ ಹುದ್ದೆಯಲ್ಲಿ ಇರುವುದಿಲ್ಲ ಎಂದು ಹೊರಟ್ಟಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಕಾಂಗ್ರೆಸ್‌ನ ಕೆಲವರಿಗೆ ಅಸಮಾಧಾನವಿದೆ ಎಂದು ಡಿ.ಕೆ. ಶಿವಕುಮಾರ್ ಈ ಹಿಂದೆ ನನಗೆ ತಿಳಿಸಿದ್ದರು ಎಂದು ಹೇಳಿದರು.

Basavaraja Hoatti
ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ನಾನು ಆಸ್ಪತ್ರೆಯಲ್ಲಿದ್ದಾಗ ಇತ್ತೀಚೆಗೆ ಮುಖ್ಯಮಂತ್ರಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ರಾಜೀನಾಮೆ ನೀಡುವಂತೆ ನನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದರು.

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಮೇಲೆ ಇಬ್ಬರು-ಮೂವರು ವಿಧಾನ ಪರಿಷತ್ ಸದಸ್ಯರ ಕಣ್ಣು ಇದೆ. ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ, ಪಕ್ಷಾತೀತವಾಗಿ ಸಭಾಪತಿ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದೇನೆ. ಸರ್ಕಾರದಿಂದ ಅಧಿಕೃತವಾಗಿ ಹುದ್ದೆ ತ್ಯಜಿಸುವಂತೆ ಸೂಚನೆ ಬಂದರೆ, ಅವಿಶ್ವಾಸ ನಿರ್ಣಯಕ್ಕಾಗಿ ಕಾಯದೆ ತಕ್ಷಣವೇ ರಾಜೀನಾಮೆ ನೀಡುತ್ತೇನೆ. ಅಧಿಕಾರಕ್ಕಾಗಿ ಹುದ್ದೆಯಲ್ಲಿ ಅಂಟಿಕೊಂಡಿರುವ ವ್ಯಕ್ತಿ ನಾನು ಅಲ್ಲ. ಇಲ್ಲದಿದ್ದರೆ ನನ್ನ ಅವಧಿ ಮುಂದುವರಿಸುತ್ತೇನೆ. ಈ ಕುರಿತ ಊಹಾಪೋಹಗಳಿಗೆ ತೆರೆ ಬೀಳಬೇಕು ಎಂಬುದು ನನ್ನ ಆಶಯ ಎಂದು ಬಸವರಾಜ ಹೊರಟ್ಟಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com