

ಬೆಂಗಳೂರು: ರಾಮಲಿಂಗಾ ರೆಡ್ಡಿಯವರು ಕಾಂಗ್ರೆಸ್ ನ ಹಿರಿಯ ನಾಯಕರು, ಅವರಿಗೆ ಯಾವುದೇ ರೀತಿಯ ಅಸಮಾಧಾನವಿದ್ದರೆ ವರಿಷ್ಠರು ಕುಳಿತು ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಏನೇ ಭಿನ್ನಾಭಿಪ್ರಾಯವಿದ್ದರೂ ವರಿಷ್ಠರು ಕರೆದು ಮಾತನಾಡಿ ಬಗೆಹರಿಸುತ್ತಾರೆ. ರಾಮಲಿಂಗಾ ರೆಡ್ಡಿಯವರ ಸೇವೆ ಪಕ್ಷಕ್ಕೆ ಈ ರಾಜ್ಯಕ್ಕೆ ಅಗತ್ಯವಿದೆ. ಅವರಿಗೆ ಏನೇ ಅಸಮಾಧಾನವಿದ್ದರೂ ಕೂಡ ನಮ್ಮ ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ ಎಂದರು.
ರಾಮಲಿಂಗಾ ರೆಡ್ಡಿಯವರು 9 ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ, ಅವರ ಅನುಭವ ನಮಗೆ ಬೇಕಾಗಿದೆ. ಬಿಜೆಪಿಯವರು ಹೇಳಿದಂತೆ ಏನೂ ಇಲ್ಲ, ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
Advertisement