

ಮೈಸೂರು: ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಹೀಗಾಗಿ ಅವರು ಪಕ್ಷ ತೊರೆಯುತ್ತಾರೆಯೇ ಅಥವಾ ಪಕ್ಷದಲ್ಲೇ ಉಳಿಯುತ್ತಾರೆಯೇ ಎಂಬ ಊಹಾಪೋಹಗಳು ಇವೆ. ಈ ಮಧ್ಯೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದು ಜಿ.ಟಿ ದೇವೇಗೌಡರು ಜೆಡಿಎಸ್ ಬಿಡಲ್ಲ. ಜೆಡಿಎಸ್ ನಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ನಾನು ಹೆಚ್ ಡಿ ಕುಮಾರಸ್ವಾಮಿ ಸೇರಿ ಎಲ್ಲರೂ ಒಟ್ಟಾಗಿ ಕೂತು ಮಾತನಾಡುತ್ತೇವೆ. ಜಿಟಿ ದೇವೇಗೌಡರು ನಮ್ಮ ಪಕ್ಷ ಬಿಟ್ಟು ಹೋಗುವುದಿಲ್ಲ. ಜಿಟಿಡಿ ಖುದ್ದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಈ ಬಗ್ಗೆ ಹೇಳಿದ್ದಾರೆ ಎಂದು ಶಾಸಕ ಹೆಚ್ ಡಿ ರೇವಣ್ಣ ಸ್ಪಷ್ಟಪಡಿಸಿದರು.
Advertisement