ವರಸೆ ಬದಲಿಸಿದ ವಲಸಿಗರು: ಹತಾಶೆಯಿಂದ ಸಿದ್ದು ಬಣ ತೊರೆದ ಅಹಿಂದ ನಾಯಕರು; ಸರ್ಕಾರದಲ್ಲಿ ಮೂಲ ಕಾಂಗ್ರೆಸ್ಸಿಗರ ಕಾರು-ಬಾರು!

ನಾವಿಬ್ಬರೂ ಮೂಲ ಕಾಂಗ್ರೆಸ್ ಕಾರ್ಯಕರ್ತರು ಎಂದು ಅವರು ತಮ್ಮ ಕೊರಟಗೆರೆ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ ಕೆ ಹರಿಪ್ರಸಾದ್ ಕೂಡ ಅಪ್ಪಟ ಕಾಂಗ್ರೆಸ್ಸಿಗ.
Dk Shivakumar And B.K hariprasad
ಡಿ.ಕೆ ಶಿವಕುಮಾರ್ ಮತ್ತು ಬಿ.ಕೆ ಹರಿಪ್ರಸಾದ್
Updated on

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೈಜೋಡಿಸಿದ ಅಹಿಂದ ನಾಯಕರು ಈಗ ಹತಾಶರಾಗಿರುವಂತೆ ಕಾಣುತ್ತಿರುವುದರಿಂದ, ಮೂಲ ಕಾಂಗ್ರೆಸ್ ನಾಯಕರು ತಮ್ಮ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ, ಪಕ್ಷ ಮತ್ತು ಸರ್ಕಾರದ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಸೇರಿದಂತೆ "ಮೂಲ ಕಾಂಗ್ರೆಸ್ ನಾಯಕರು ಆಡಳಿತ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಭಾನುವಾರ ಹೇಳಿದ್ದರು, ಅದರ ಅರ್ಥ ಅವರು ಸಿಎಂಗೆ ಸಂಪೂರ್ಣ ಬೆಂಬಲ ನೀಡಿದ್ದ ಒಟ್ಟಾಗಿ ಕೆಲಸ ಮಾಡುವುದು ಮತ್ತು ಪಕ್ಷವನ್ನು ಬಲಪಡಿಸಿ 2028 ರಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ಎಂದು ಹೇಳಿದರು.

ನಾವು ಕಾಂಗ್ರೆಸ್‌ನಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ನಮ್ಮ ರಾಜಕೀಯ ಪ್ರಾರಂಭಿಸಿದ್ದೇವೆ ಮತ್ತು ಈಗ ಸಿಎಂ ಮತ್ತು ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇವೆ. ನಾವಿಬ್ಬರೂ ಮೂಲ ಕಾಂಗ್ರೆಸ್ ಕಾರ್ಯಕರ್ತರು ಎಂದು ಅವರು ತಮ್ಮ ಕೊರಟಗೆರೆ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದರು.

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ ಕೆ ಹರಿಪ್ರಸಾದ್ ಕೂಡ ಅಪ್ಪಟ ಕಾಂಗ್ರೆಸ್ಸಿಗ. 2028 ರಲ್ಲಿ ಕಾಂಗ್ರೆಸ್ ತತ್ವಗಳು ಮತ್ತು ಸಿದ್ಧಾಂತದ ಆಧಾರದ ಮೇಲೆ ಜನಪರ ಆಡಳಿತ ನೀಡುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾವು ಬದ್ಧರಾಗಿದ್ದೇವೆ" ಎಂದು ಅವರು ಹೇಳಿದರು.

Dk Shivakumar And B.K hariprasad
'ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ'; ಗೃಹ ಲಕ್ಷ್ಮಿ, ಗೃಹ ಜ್ಯೋತಿ ಖಾತರಿಗಳನ್ನು ನಿಲ್ಲಿಸಲ್ಲ, ಆತಂಕ ಬೇಡ: ಡಿ.ಕೆ ಶಿವಕುಮಾರ್

ಸಿದ್ದರಾಮಯ್ಯ ಪಾಳಯದಿಂದ ಸಂಭಾವ್ಯ ಸಿಎಂ ಎಂದು ಬಿಂಬಿಸಲ್ಪಟ್ಟಿದ್ದ ಪರಮೇಶ್ವರ್, ಡಿಸಿಎಂ ಹುದ್ದೆಯನ್ನು ಪಡೆಯುವಲ್ಲಿ ಯಶಸ್ವಿಯಾದರು. ಆದರೆ ಸಿದ್ದರಾಮಯ್ಯ ಆಪ್ತರಾದ ಸತೀಶ್ ಜಾರಕಿಹೊಳಿ, ಡಾ. ಎಚ್.ಸಿ. ಮಹದೇವಪ್ಪ ಮತ್ತು ಜಮೀರ್ ಅಹ್ಮದ್ ಖಾನ್ ಅವರಿಗೆ ಅವರು ಬಯಸಿದ್ದನ್ನು ಪಡೆಯಲು ಸಾಧ್ಯವಾಗಲಿಲ್ಲ.

ಸತೀಶ್ ಕೆಪಿಸಿಸಿ ಅಧ್ಯಕ್ಷರಾಗುವ ವಿಶ್ವಾಸ ಹೊಂದಿದ್ದರು ಆದರೆ ತಮ್ಮ ಮೂಲ ಲೋಕೋಪಯೋಗಿ ಇಲಾಖೆಯ ಖಾತೆಗೆ ತೃಪ್ತಿಪಟ್ಟರು. ಮಹಾದೇವಪ್ಪ ಮತ್ತು ಜಮೀರ್ ಅವರಿಗೆ ಸ್ಥಾನ ಸಿಗಲಿಲ್ಲ, ಈಗ ಸಚಿವ ಸ್ಥಾನಕ್ಕಾಗಿ ಒತ್ತಾಯಿಸಿ ರ್ಯಾಲಿಗಳನ್ನು ಪ್ರಾಯೋಜಿಸುತ್ತಿದ್ದಾರೆ.

ಆದರೆ ಸಂತೋಷ್ ಲಾಡ್ ಶಿವಕುಮಾರ್ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಆಪ್ತ ಬೆಂಬಲಿಗರೊಂದಿಗೆ ಸಿದ್ದರಾಮಯ್ಯ ಅವರ ಸಂಬಂಧ ಹದಗೆಟ್ಟಿದೆ ಎಂದು ಮೂಲಗಳು ತಿಳಿಸಿವೆ, ಏಕೆಂದರೆ ಅವರು ಸಚಿವ ಸ್ಥಾನಗಳಿಗೆ ಅವರನ್ನು ಬೆಂಬಲಿಸಲಿಲ್ಲ. ಆದರೆ ಸತೀಶ್ ಅಹಿಂದ ಪಡೆಯನ್ನು ಪುನರುಜ್ಜೀವನಗೊಳಿಸುವ ಭರವಸೆ ಹೊಂದಿದ್ದಾರೆ.

ಸಿದ್ದರಾಮಯ್ಯ ಪಾಳಯದ ಹೆಚ್ಚಿನ ನಾಯಕರು ಅಸಮಾಧಾನಗೊಂಡು ತಮ್ಮ ನಿಷ್ಠೆ ಬದಲಾಯಿಸಿದರು, ಇದರಿಂದ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಶಿವಕುಮಾರ್ ಆಡಳಿತದ ಮೇಲೆ ಗಮನಹರಿಸಲು ಸಾಕಷ್ಟು ದಾರಿ ಮಾಡಿಕೊಟ್ಟಿದೆ. ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದು ಒಂದು ಅದ್ಭುತ ಪ್ರಯತ್ನವಾಗಿದ್ದು, ಸರ್ಕಾರಕ್ಕೆ ವಿಮೆಯಂತೆ ಕೆಲಸ ಮಾಡುತ್ತದೆ" ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com