

ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇದೇ 30ರಂದು ತೆರವಾಗಲಿರುವ 7 ಸ್ಥಾನಗಳಿಗೆ ಗುರುವಾರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ 4 ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಲಿದ್ದು, ಬಾಕಿ 1 ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸ್ಪರ್ಧೆಯಿದೆ. ಗುರುವಾರ ಬೆಳಗ್ಗೆ 9ರಿಂದ ಸಂಜೆ 4ವರೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭ ವಾಗಲಿದೆ.
ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ನಾದಿನ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ನಡೆಯುವ ಭೀತಿಯ ನಡುವೆಯೇ ಜೆಡಿಎಸ್ ಬುಧವಾರ ತನ್ನ ಶಾಸಕರನ್ನು ರೆಸಾರ್ಟ್ಗೆ ಸ್ಥಳಾಂತರಿಸಿದೆ.
ಕಾಂಗ್ರೆಸ್ನಿಂದ ಬಿ ಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರ್, ಪಿ ವಿ ಮೋಹನ್ ಮತ್ತು ಶಿವಣ್ಣ ಮಳವಳ್ಳಿ - ಮತ್ತು ಬಿಜೆಪಿಯಿಂದ - ರಘು ಕೌಟಿಲ್ಯ ಮತ್ತು ಲಿಂಗರಾಜ್ ಪಾಟೀಲ್ ಕಣಕ್ಕಿಳಿದಿದ್ದಾರೆ. ಏಳನೇ ಸ್ಥಾನಕ್ಕೆ, ಕಾಂಗ್ರೆಸ್ನ ವಿನಯ್ ಕಾರ್ತಿಕ್ ಮತ್ತು ಜೆಡಿಎಸ್ನ ಗೋವಿಂದರಾಜು ನಡುವೆ ತೀವ್ರ ಸ್ಪರ್ಧೆ ನಡೆಯುವ ಸಾಧ್ಯತೆಯಿದೆ.
ಬಿಜೆಪಿಯು ಎನ್ಡಿಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಧಿಯನ್ನು ಬೆಂಬಲಿಸಿದ್ದು, ಗೆಲುವು ಸಾಧಿಸಲು 'ಆತ್ಮಸಾಕ್ಷಿ' ಹೆಸರಿನಲ್ಲಿ ಚಲಾವಣೆಯಾ ಗುವ ಅಡ್ಡ ಮತಗಳೇ ನಿರ್ಣಾಯಕವಾಗುವ ನಿರೀಕ್ಷೆಯಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಮೂರೂ ಪಕ್ಷಗಳು ಶಾಸಕಾಂಗ ಪಕ್ಷದ ಸಭೆ ನಡೆಸಿ ವಿಪ್ ನೀಡಿ ತಂತ್ರಗಳ ಬಗ್ಗೆ ಚರ್ಚಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ರೆಸಾರ್ಟ್ ಮೊರೆ ಹೋಗಿದ್ದರೆ, ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಅಭ್ಯರ್ಥಿಗಳ ಗೆಲುವಿನ ಕುರಿತಂತೆ ಚರ್ಚಿಸಿ ಅದಕ್ಕೆ ಪೂರಕ ವ್ಯವಸ್ಥೆ ಮಾಡಿಕೊಂಡಿದೆ.
ಜೆಡಿಎಸ್ 18 ಶಾಸಕರನ್ನು ಹೊಂದಿದ್ದು, ಮೈತ್ರಿಕೂಟದ ಪಾಲುದಾರ ಬಿಜೆಪಿಯಿಂದ ಏಳು ಹೆಚ್ಚುವರಿ ಮತಗಳನ್ನು ಪಡೆಯುವ ನಿರೀಕ್ಷೆಯಿದೆ. ಅದು ಬಸನಗೌಡ ಪಾಟೀಲ್ ಯತ್ನಾಳ್ (ಬಿಜೆಪಿಯಿಂದ ಉಚ್ಚಾಟನೆ) ಅವರ ಬೆಂಬಲವನ್ನೂ ಕೋರುತ್ತಿದೆ.
ಮುಖ್ಯಮಂತ್ರಿ ಶಾಸಕರಿಗೆ ಅಡ್ಡ ಮತದಾನದ ವಿರುದ್ಧ ಎಚ್ಚರಿಕೆ ನೀಡಿದರು. ಕಾಂಗ್ರೆಸ್ಗೆ ಆಪ್ತರಾಗಿರುವ ಜೆಡಿಎಸ್ನ ಹಿರಿಯ ಶಾಸಕ ಜಿ.ಟಿ. ದೇವೇಗೌಡರು ಮತ ಚಲಾಯಿಸುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ದೇವೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ 62 ಸದಸ್ಯ ಬಲ ಹೊಂದಿದ್ದು, ಇಬ್ಬರೂ ಅಭ್ಯರ್ಥಿಗಳು ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ. ಇಬ್ಬರು ಅಭ್ಯರ್ಥಿಗಳಿಗೆ ತಲಾ 29 ಮತಗಳನ್ನು ಹಂಚಿಕೆ ಮಾಡಿದರೆ 4 ಹೆಚ್ಚುವರಿ ಮತಗಳು ಉಳಿಯಲಿವೆ. ತಲಾ 30 ಮತಗಳನ್ನು ಹಂಚಿಕೆ ಮಾಡಿದರೆ 2 ಹೆಚ್ಚುವರಿ ಮತಗಳು ಉಳಿಯಲಿವೆ.
Advertisement