‘ನಿಮ್ಮದೇ ಶಾಸಕರ ಮೇಲೆ ನಂಬಿಕೆ ಇಲ್ಲವೇ?’ ರೆಸಾರ್ಟ್ ರಾಜಕೀಯದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

ನಿಮ್ಮದೇ ಪಕ್ಷದ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯುತ್ತಿದ್ದರೆ, ಸಾಮಾನ್ಯ ಮತದಾರರಿಗೆ ನೀವು ಯಾವ ಸಂದೇಶ ನೀಡುತ್ತಿದ್ದೀರಿ? ನಿಮ್ಮದೇ ಶಾಸಕರ ಮೇಲೆ ನಿಮಗೆ ವಿಶ್ವಾಸ ಇಲ್ಲ ಎಂಬುದನ್ನು ಇದು ತೋರಿಸುತ್ತದೆ.
MLA Suresh Kumar
ಶಾಸಕ ಸುರೇಶ್ ಕುಮಾರ್
Updated on

ಬೆಂಗಳೂರು: ವಿಧಾನ ಪರಿಷತ್ (MLC) ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಶಾಸಕರನ್ನು ರೆಸಾರ್ಟ್‌ಗಳಿಗೆ ಕರೆದೊಯ್ಯುವ ಸಂಪ್ರದಾಯದ ವಿರುದ್ಧ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷಭೇದ ಮರೆತು ಹೇಳುವುದಾದರೆ ‘ರೆಸಾರ್ಟ್ ರಾಜಕೀಯ’ಕ್ಕೆ ಅಂತ್ಯ ಹಾಡಬೇಕಾದ ಸಮಯ ಬಂದಿದೆ ಎಂದು ಅಭಿಪ್ರಾಯಪಟ್ಟರು.

"ನಿಮ್ಮದೇ ಪಕ್ಷದ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯುತ್ತಿದ್ದರೆ, ಸಾಮಾನ್ಯ ಮತದಾರರಿಗೆ ನೀವು ಯಾವ ಸಂದೇಶ ನೀಡುತ್ತಿದ್ದೀರಿ? ನಿಮ್ಮದೇ ಶಾಸಕರ ಮೇಲೆ ನಿಮಗೆ ವಿಶ್ವಾಸ ಇಲ್ಲ ಎಂಬುದನ್ನು ಇದು ತೋರಿಸುತ್ತದೆ. ನಿಮ್ಮ ಶಾಸಕರು ಹಣಕ್ಕೆ ಮಾರಾಟವಾಗಬಹುದು ಅಥವಾ ಬೇರೆ ಪಕ್ಷಗಳಿಗೆ ಹೋಗಬಹುದು ಎಂದು ನೀವು ಭಾವಿಸುತ್ತಿದ್ದರೆ, ಅದು ಅತ್ಯಂತ ದುಃಖದ ಸಂಗತಿ" ಎಂದು ಹೇಳಿದರು.

ರಾಜಕೀಯ ಪಕ್ಷಗಳು ತಮ್ಮ ಶಾಸಕರ ಮೇಲೆ ನಂಬಿಕೆ ಇಡಬೇಕು ಮತ್ತು ಮತದಾರರು ನೀಡಿರುವ ಜನಾದೇಶವನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.

MLA Suresh Kumar
ಪರಿಷತ್‌ ಚುನಾವಣೆ: ಅಡ್ಡ ಮತದಾನ ಮಾಡಿಬಿಟ್ರಾ ಜಿ.ಟಿ ದೇವೇಗೌಡ? ಜೆಡಿಎಸ್ ಗೆ 'ಕೈ' ಕೊಟ್ರಾ GTD!

"ನಿಮ್ಮ ಶಾಸಕರ ಮೇಲೂ, ನಿಮ್ಮನ್ನು ಆಯ್ಕೆ ಮಾಡಿದ ಮತದಾರರ ಮೇಲೂ ನಂಬಿಕೆ ಮತ್ತು ವಿಶ್ವಾಸ ಇರಬೇಕು. ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸುವ ಸಂಸ್ಕೃತಿ ಅಂತ್ಯಗೊಳ್ಳಬೇಕು" ಎಂದು ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಗಳ ಸಂದರ್ಭದಲ್ಲಿ ಅಡ್ಡಮತದಾನ ಹಾಗೂ ಕುದುರೆ ವ್ಯಾಪಾರ ತಡೆಯುವ ಉದ್ದೇಶದಿಂದ ರಾಜಕೀಯ ಪಕ್ಷಗಳು ತಮ್ಮ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸುವುದು ಸಾಮಾನ್ಯವಾಗಿದೆ. ಆದರೆ ಈ ಪದ್ಧತಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದದ್ದು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com