

ಬೆಂಗಳೂರು: ಮಂಗಳವಾರ ರೆಸಾರ್ಟ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮತ್ತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಅವರಿಗೆ ವೇದಿಕೆಯಲ್ಲಿ ಪ್ರಾಮುಖ್ಯತೆ ನೀಡಲಾಗಿತ್ತು.
ಇದರಿಂದಾಗಿ ಅವರು ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗುತ್ತಾರೆಯೇ ಎಂಬ ಊಹಾಪೋಹಗಳು ದಟ್ಟವಾಗಿವೆ. ಸಂಪುಟದಲ್ಲಿರುವ ಏಕೈಕ ಮೇಲ್ಮನೆ ಸದಸ್ಯರಾಗಿರುವ ಯತೀಂದ್ರ ಅವರ ತಂದೆ ಸಿದ್ದರಾಮಯ್ಯ, ಸಿಡಬ್ಲ್ಯೂಸಿ ಸದಸ್ಯರೂ ಆಗಿದ್ದಾರೆ.
ಸಿಎಲ್ಪಿ ನಾಯಕರಾಗಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಯು.ಟಿ. ಖಾದರ್ ಮತ್ತು ಕೆ.ಎಚ್. ಮುನಿಯಪ್ಪ ಮತ್ತು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಯತೀಂದ್ರಗೆ ಅವಕಾಶ ಸಿಕ್ಕಿತ್ತು.
ಯತೀಂದ್ರ ಸಿದ್ದರಾಮಯ್ಯ ಅವರು ಹಿರಿಯರ ಗುಂಪಿಗೆ ಸೇರ್ಪಡೆಗೊಳ್ಳುವುದರಿಂದ ಪಕ್ಷವು ಅವರಿಗೆ ಪ್ರಾಮುಖ್ಯತೆ ನೀಡುವುದನ್ನು ಮುಂದುವರಿಸುತ್ತದೆ, ಹಾಗೂ ಅವರಿಗೆ ಸದನ ನಾಯಕನ ಹುದ್ದೆಯನ್ನು ಸಹ ನೀಡಬಹುದು ಎಂಬ ಸೂಚನೆಯಾಗಿದೆ ಎಂದು ಹೇಳಲಾಗುತ್ತಿದೆ.
ಸಂಪುಟ ವಿಸ್ತರಣೆಯ ಸಮಯದಲ್ಲಿ ಎಂಎಲ್ಸಿಗಳಾದ ಸಲೀಂ ಅಹ್ಮದ್ ಮತ್ತು ವಸಂತ್ ಕುಮಾರ್ ಅವರಿಗೆ ಸಚಿವ ಸ್ಥಾನ ದೊರೆತರೂ ಯತೀಂದ್ರ ಅವರ ಸ್ಥಾನ ಬದಲಾಗುವ ಸಾಧ್ಯತೆ ಕಡಿಮೆ ಎಂದು ಕಾಂಗ್ರೆಸ್ ಎಂಎಲ್ಸಿಯೊಬ್ಬರು ತಿಳಿಸಿದ್ದಾರೆ.
ಶಿವಕುಮಾರ್, ಹರಿಪ್ರಸಾದ್ ಮತ್ತು ಸುರ್ಜೆವಾಲಾ ಅವರು ಸಿದ್ದರಾಮಯ್ಯ ಅವರು ಸಿಎಲ್ಪಿಯನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿದರೂ, ಸಿದ್ದರಾಮಯ್ಯ ಆ ಪ್ರಸ್ತಾಪವನ್ನು ನಯವಾಗಿಯೇ ತಿರಸ್ಕರಿಸಿದರು. ಒಬ್ಬ ಶಾಸಕರು ಇದನ್ನು ರಾಜತಾಂತ್ರಿಕತೆಯನ್ನು ಪ್ರದರ್ಶನ ಎಂದು ಪರಿಗಣಿಸೆಲಾಗಿದೆ,
ಸಿದ್ದರಾಮಯ್ಯ ಅವರು ನಾಯಕತ್ವ ಬದಲಾವಣೆಗೆ ಮುಂಚಿತವಾಗಿ ತಮ್ಮ ಕೆಲವು ನಿಷ್ಠಾವಂತರು ತಮ್ಮ ವಿರುದ್ಧ ಹೋದರು ಎಂದು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಮತದಾರರ ಪಟ್ಟಿಯ ಬಗ್ಗೆ ಜಾಗರೂಕರಾಗಿರಲು ಶಾಸಕರಿಗೆ ಸೂಚಿಸಿದರು .
Advertisement