ಆಣೆ-ಪ್ರಮಾಣಕ್ಕೆ ಬ್ರೇಕ್: ಏಕಾಂಗಿಯಾದ ಬಿ.ವೈ ವಿಜಯೇಂದ್ರ; ಧರ್ಮಸ್ಥಳಕ್ಕೆ ಒಬ್ಬರೇ ಭೇಟಿ!

ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಬೇಕು ಎಂದು ಹೇಳಿದ್ದರು.
BY Vijayendra
ಬಿ.ವೈ. ವಿಜಯೇಂದ್ರ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಇತ್ತೀಚಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ನಂತರ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತಷ್ಟು ತೀವ್ರವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಏಕಾಂಗಿಯಾಗಿದ್ದಾರೆ.

ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಬೇಕು ಎಂದು ಹೇಳಿದ್ದರು. ಆದರೆ ಪವಿತ್ರ ಕ್ಷೇತ್ರವಾದ ಧರ್ಮಸ್ಥಳವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಬೇಡ ಎಂದು ಪಕ್ಷದಲ್ಲೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು.

ಇದರ ಬೆನ್ನಲ್ಲೇ ವಿಜಯೇಂದ್ರ ಅವರು ಧರ್ಮಸ್ಥಳಕ್ಕೆ ಒಬ್ಬರೇ ಭೇಟಿ ನೀಡಲು ನಿರ್ಧರಿಸಿದ್ದಾರೆ. ಇಂದು ರಾತ್ರಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ವಿಜಯೇಂದ್ರ ಅವರು, ಬಳಿಕ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ವಿಜಯೇಂದ್ರ ಅವರು ನಾಳೆ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

BY Vijayendra
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ನಾಟಕವಾಡಿ ವಿವಾದ ಸೃಷ್ಟಿಸಬೇಡಿ ಎಂದ ಹೈಕಮಾಂಡ್: ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಬಿಜೆಪಿ ನಾಯಕರು; Video

ಧರ್ಮಸ್ಥಳದಲ್ಲಿ ಶಾಂಸಕ ಸಭೆಗೆ ಬ್ರೇಕ್ ಬಿದ್ದ ನಂತರ ಪಕ್ಷದ ಕೆಲವು ನಾಯಕರು ಈ ಗೊಂದಲಕ್ಕೆ ವಿಜಯೇಂದ್ರ ಅವರನ್ನೇ ದೂಷಿಸಲು ಆರಂಭಿಸಿದ್ದರು ಎನ್ನಲಾಗಿದೆ. ಇದರಿಂದ ತೀವ್ರ ಬೇಸರಗೊಂಡಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ, ಈಗ ಶಾಸಕರನ್ನು ಕರೆದೊಯ್ಯುವ ನಿರ್ಧಾರ ಕೈಬಿಟ್ಟು, ತಾವು ಒಬ್ಬರೇ ಧರ್ಮಸ್ಥಳಕ್ಕೆ ತೆರಳಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com