ಚುನಾವಣೆ ಬಂದಾಗ ಸಾಮಾಜಿಕ ನ್ಯಾಯ, ರಾಜಕೀಯ ಆಪತ್ತು ಎದುರಾದಾಗ ಅಹಿಂದ ನೆನಪಾಗುತ್ತೆ: ಸಿಎಂ ವಿರುದ್ಧ HDK ವಾಗ್ದಾಳಿ

ಕಳೆದ 10 ವರ್ಷಗಳಿಂದ ಮೀಸಲಾತಿಯ ಪ್ರಯೋಜನ ಪಡೆದ ಸಮುದಾಯಗಳ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಕುಮಾರಸ್ವಾಮಿ ಒತ್ತಾಯಿಸುತ್ತಿದ್ದೇನೆ. ಪಟ್ಟಿ ಬಿಡುಗಡೆಯಾದರೆ, ಸಿದ್ದರಾಮಯ್ಯ ಅವರ ನಿಜವಾದ ಬಣ್ಣ ಬಯಲಾಗುತ್ತದೆ ಎಂದು ಅವರು ಹೇಳಿದರು.
HD Kumaraswamy
ಎಚ್.ಡಿ. ಕುಮಾರಸ್ವಾಮಿ
Updated on

ಬೆಂಗಳೂರು: ಒಳ ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಪಲಾಯನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ‌.

ನಗರದ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಮಾಲೂರು ವಿಧಾನಸಭೆ ಕ್ಷೇತ್ರದ ಹಿರಿಯ ಮುಖಂಡ ಹೂಡಿ ವಿಜಯಕುಮಾರ್ ಅವರ ಪಕ್ಷ ಸೇರ್ಪಡೆ ಹಾಗೂ ಅವರ ನೇತೃತ್ವದ ಸ್ವಾಭಿಮಾನಿ ಜನತಾ ಪಕ್ಷದ ವಿಲೀನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದು, ದೇವರಾಜ ಅರಸು ಅವರ ದಾಖಲೆ ಮುರಿದಿದ್ದಾರೆ.

ಅಹಿಂದಾ ನಾಯಕರು ಎಂದು ಹೇಳಿಕೊಳ್ಳುವ ಅವರು ಜಾತಿ ಹೆಸರಿನಲ್ಲಿ ರಾಜಕೀಯ ಲಾಭ ಪಡೆದಿದ್ದಾರೆ. ಆದರೂ ಒಳ ಮೀಸಲಾತಿ ಬಗ್ಗೆ ಇನ್ನೂ ನಿರ್ಧಾರ ಕೈಗೊಳ್ಳದಿರುವುದು ಆಶ್ಚರ್ಯಕರ ಎಂದು ಹೇಳಿದರು. ಸಾಮಾಜಿಕ ನ್ಯಾಯದ ಮಾತು ಚುನಾವಣೆ ಬಂದಾಗ ಅಥವಾ ರಾಜಕೀಯ ಆಪತ್ತು ಎದುರಾದಾಗ ಮಾತ್ರ ಅವರಿಗೆ ನೆನಪಾಗುತ್ತದೆ. ನಂತರ ಅಹಿಂದಾ ಎಲ್ಲಿಗೆ ಹೋಗುತ್ತದೆ ಎಂಬುದನ್ನು ಜನರು ಗಮನಿಸಬೇಕು ಎಂದು ಅವರು ಹೇಳಿದರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದರು ಮತ್ತು ಅನೇಕ ಸಮುದಾಯಗಳು ಮೀಸಲಾತಿಯ ಪ್ರಯೋಜನ ಪಡೆಯುವಂತೆ ನೋಡಿಕೊಂಡರು ಎಂದು ಅವರು ಹೇಳಿದರು. ಇದು ಸರ್ಕಾರಿ ನೇಮಕಾತಿಗಳಲ್ಲಿ ಹಾಗೂ ಶಾಸಕಾಂಗ ಸಭೆಯಲ್ಲಿ ಸ್ಪಷ್ಟವಾಗಿದೆ.

HD Kumaraswamy
'ನಿಮ್ಮ ಕುಚುಕು ಗೆಳೆಯನಿಗಾಗಿ ಮಾತು ಉಳಿಸಿಕೊಳ್ಳಿ ಸಿದ್ದರಾಮಯ್ಯನವರೇ': ಹೆಚ್.ಡಿ ಕುಮಾರಸ್ವಾಮಿ

ಕಳೆದ 10 ವರ್ಷಗಳಿಂದ ಮೀಸಲಾತಿಯ ಪ್ರಯೋಜನ ಪಡೆದ ಸಮುದಾಯಗಳ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಕುಮಾರಸ್ವಾಮಿ ಒತ್ತಾಯಿಸುತ್ತಿದ್ದೇನೆ. ಪಟ್ಟಿ ಬಿಡುಗಡೆಯಾದರೆ, ಸಿದ್ದರಾಮಯ್ಯ ಅವರ ನಿಜವಾದ ಬಣ್ಣ ಬಯಲಾಗುತ್ತದೆ ಎಂದು ಅವರು ಹೇಳಿದರು.

ರಾಜ್ಯದ ಎಲ್ಲಾ ಸಮುದಾಯಗಳು ಜನಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಸರ್ಕಾರಕ್ಕೆ ಆಶೀರ್ವಾದ ನೀಡಬೇಕು. ಐದು ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಅನ್ಯಾಯಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com