ಡಿ.ಕೆ ಶಿವಕುಮಾರ್ ಔತಣಕೂಟ: 2028ರ ವಿಧಾನಸಭೆ ಚುನಾವಣೆ ಗೆಲುವಿಗೆ ಸಿಎಂ-ಡಿಸಿಎಂ ಒಗ್ಗಟ್ಟು ಪ್ರದರ್ಶನ

ಅವರ ಪೋಸ್ಟ್‌ನಲ್ಲಿ, 2023ರ ವಿಧಾನಸಭೆ ಚುನಾವಣೆಯಂತೆಯೇ ಇಬ್ಬರ ನಾಯಕತ್ವದ ಸಮನ್ವಯದಿಂದ ಕಾಂಗ್ರೆಸ್ ಪಕ್ಷವನ್ನು 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತರುವ ಗುರಿ ಹೊಂದಿರುವುದನ್ನು ಸೂಚಿಸಿದಂತೆ ಕಾಣಿಸಿದೆ.
D K Shivakumar welcome Siddaramaiah
ಸಿದ್ದರಾಮಯ್ಯ ಸ್ವಾಗತಿಸಿದ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಿನ್ನೆ ಮಂಗಳವಾರ ರಾತ್ರಿ ಪಕ್ಷದ ಶಾಸಕರಿಗೆ ಔತಣ ಕೂಟ ಆಯೋಜಿಸಿದ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಕಿದ ಸಂದೇಶವು ಅಭಿನಂದನೆ ಸಲ್ಲಿಸಿದ್ದರೂ, ಅದರೊಳಗೆ ಸೂಕ್ಷ್ಮ ಸಂದೇಶವೊಂದನ್ನು ನೀಡಿದಂತೆ ಕಾಣಿಸಿದೆ.

ಅವರ ಪೋಸ್ಟ್‌ನಲ್ಲಿ, 2023ರ ವಿಧಾನಸಭೆ ಚುನಾವಣೆಯಂತೆಯೇ ಇಬ್ಬರ ನಾಯಕತ್ವದ ಸಮನ್ವಯದಿಂದ ಕಾಂಗ್ರೆಸ್ ಪಕ್ಷವನ್ನು 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತರುವ ಗುರಿ ಹೊಂದಿರುವುದನ್ನು ಸೂಚಿಸಿದಂತೆ ಕಾಣಿಸಿದೆ.

ಈ ಪೋಸ್ಟ್‌ ನ್ನು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಇನ್ನೂ ಸ್ವಲ್ಪ ಕಾಲ ಕಾಯಬೇಕೆಂದು ಡಿ ಕೆ ಶಿವಕುಮಾರ್ ಹಾಗೂ ಅವರ ಬಣಕ್ಕೆ ಸಿದ್ದರಾಮಯ್ಯ ನೀಡಿದ ಸಲಹೆಯಾಗಿ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗಿದೆ. ಎರಡು ದಿನಗಳ ದೆಹಲಿ ಭೇಟಿಯಿಂದ ಮರಳಿದ ಡಿ ಕೆ ಶಿವಕುಮಾರ್, ಪಕ್ಷದ ಉನ್ನತ ನಾಯಕರಲ್ಲಿ ಯಾರನ್ನು ಭೇಟಿ ಮಾಡಿದರು ಎಂಬುದನ್ನು ಬಹಿರಂಗಪಡಿಸದಿದ್ದರೂ, ಮುಖ್ಯಮಂತ್ರಿಯಾಗುವ ತನ್ನ ಗುರಿಯನ್ನು ತ್ಯಜಿಸಿಲ್ಲ ಎಂಬ ಸೂಕ್ಷ್ಮ ಸಂದೇಶವನ್ನು ನೀಡಿದ್ದಾರೆ.

ಆದರೆ ಸಿದ್ದರಾಮಯ್ಯ ತಮ್ಮ ಪೋಸ್ಟ್‌ನಲ್ಲಿ, ನನಗಿಂತ ಕಿರಿಯರಾದ ಡಿ ಕೆ ಶಿವಕುಮಾರ್ ಅವರ ಮುಂದಿನ ರಾಜಕೀಯ ಭವಿಷ್ಯ ಪ್ರಕಾಶಮಾನವಾಗಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಸಮೂಹ ಆಶಯ. ಅದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಕಾರ್ಯಗಳಲ್ಲಿ ಮತ್ತು ಹೋರಾಟಗಳಲ್ಲಿ ನಾನೂ ಭಾಗಿಯಾಗುತ್ತೇನೆ ಎಂದು ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಅವರ ಸಂಘಟನೆ ಸಾಮರ್ಥ್ಯ, ಸಿದ್ಧಾಂತಗಳ ಮೇಲಿನ ಬದ್ಧತೆ ಹಾಗೂ ಪರಿಶ್ರಮವನ್ನು ಅಭಿನಂದಿಸಿದ ಸಿದ್ದರಾಮಯ್ಯ, ಅದು ಪಕ್ಷದ ಯುವ ನಾಯಕರಿಗೆ ಪ್ರೇರಣೆಯಾಗುತ್ತದೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಹಲವು ರೀತಿಯಲ್ಲಿ ಕಿರುಕುಳ ನೀಡಿದರೂ, ಡಿ ಕೆ ಶಿವಕುಮಾರ್ ಅವರ ಪಕ್ಷದ ಮೇಲಿನ ನಿಷ್ಠೆ ಅಚಲವಾಗಿದೆ. ಇದು ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರೇರಣಾದಾಯಕ ಉದಾಹರಣೆ ಎಂದು ಹೇಳಿದರು.

D K Shivakumar welcome Siddaramaiah
KPCC ಅಧ್ಯಕ್ಷರಾಗಿ ಆರು ವರ್ಷ: ಡಿ.ಕೆ ಶಿವಕುಮಾರ್ ಔತಣಕೂಟ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ; ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಹಗಲು-ರಾತ್ರಿ ದುಡಿದು, ಸಮುದಾಯ ವಿಭಜನೆ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಡಿ.ಕೆ. ಶಿವಕುಮಾರ್ ಶ್ರಮಿಸಿದ್ದಾರೆ. ಎಲ್ಲಾ ಸಮುದಾಯಗಳಿಗೆ ಶಾಂತಿಯ ತೋಟದಂತೆ ರಾಜ್ಯವನ್ನು ಪುನರ್ ನಿರ್ಮಿಸಲು ಅವರು ನನ್ನೊಂದಿಗೆ ಹೆಗಲಿಗೆ ಹೆಗಲು ಸೇರಿಸಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಔತಣ ಕೂಟಕ್ಕೆ ಆಗಮಿಸಿದಾಗ, ಡಿ ಕೆ ಶಿವಕುಮಾರ್ ಅವರು ದೊಡ್ಡ ನಗೆಯೊಂದಿಗೆ ಸ್ವಾಗತಿಸಿದರು. ಬಜೆಟ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಆಡಳಿತಾರೂಢ ಪಕ್ಷದಲ್ಲಿ ಏಕತೆ ಇದೆ ಎಂಬ ಸಂದೇಶ ನೀಡಲು ಈ ದೃಶ್ಯ ಮಹತ್ವ ಪಡೆದಿತ್ತು.

ಈ ಔತಣ ಕೂಟದಲ್ಲಿ ಸಿದ್ದರಾಮಯ್ಯ ಬಣದ ಜೊತೆಗೆ ಗುರುತಿಸಲ್ಪಟ್ಟ ಹಲವು ಸಚಿವರು ಹಾಗೂ ಶಾಸಕರು ಭಾಗವಹಿಸಿದರು. ಅವರಲ್ಲಿ ಮಾಜಿ ಸಚಿವ ಕೆ ಎನ್ ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗೃಹ ಸಚಿವ ಜಿ ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್ ಮಹದೇವಪ್ಪ, ಗೃಹ ನಿರ್ಮಾಣ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಇದ್ದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ಗ್ರಾಮೀಣಾಭಿವೃದ್ಧಿ ಹಾಗೂ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸೆರಾಜು ಕೂಡ ಉಪಸ್ಥಿತರಿದ್ದರು.

ಬಿಜೆಪಿಯಿಂದ ಹೊರಹಾಕಲ್ಪಟ್ಟ ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್, ಮಾಜಿ ಸಂಸದ ವಿ ಎಸ್ ಉಗ್ರಪ್ಪ ಕೂಡ ಔತಣ ಕೂಟದಲ್ಲಿ ಭಾಗವಹಿಸಿದರು.

ಪಕ್ಷದ 140 ಶಾಸಕರ ಬೆಂಬಲ ತನ್ನೊಂದಿಗಿದೆ ಎಂದು ಆಗಾಗ ಹೇಳುತ್ತಿದ್ದ ಡಿ ಕೆ ಶಿವಕುಮಾರ್, ಔತಣಕೂಟ ಮೂಲಕ ಅದನ್ನು ಪ್ರದರ್ಶಿಸಲು ಯಶಸ್ವಿಯಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com