ರಾಜ್ಯ ಸಭಾ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಶಾಸಕರಿಗೆ ದೊಡ್ಡ ಆಫರ್ ಬಂದಿವೆ: ಎಲ್ಲರನ್ನೂ ಕಾಪಾಡಬೇಕಿರುವುದು ನಮ್ಮ ಕರ್ತವ್ಯವಲ್ಲವೇ? ಡಿ.ಕೆ ಶಿವಕುಮಾರ್

ರಾಜಕೀಯ ಪಕ್ಷಗಳಿಗೆ ಕುದುರೆ ವ್ಯಾಪಾರದ ಭೀತಿ ಇರುತ್ತದೆ. ರಾಜಕೀಯ ರಂಗದಲ್ಲಿ ಎಲ್ಲಾ ಪಕ್ಷಗಳು ಎದುರಿಸುವ ವಿಚಾರ ಇದು. ಅವರು ಇಲ್ಲಿಗೆ ಬಂದಿರುವಾಗ ಅವರಿಗೆ ನೆರವು ನೀಡುವುದು ನಮ್ಮ ಕರ್ತವ್ಯ.
Dk Shivakumar with odisha mlas
ಒಡಿಶಾ ಕಾಂಗ್ರೆಸ್ ಶಾಸಕರ ಜೊತೆ ಡಿಕೆ ಶಿವಕುಮಾರ್
Updated on

ಬೆಂಗಳೂರು: ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು.

ವಿಧಾನಸೌಧದ ಆವರಣದಲ್ಲಿ ಹಾಗೂ ಬಿಡದಿಯ ರೆಸಾರ್ಟ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಜಕೀಯ ಪಕ್ಷಗಳಿಗೆ ಕುದುರೆ ವ್ಯಾಪಾರದ ಭೀತಿ ಇರುತ್ತದೆ. ರಾಜಕೀಯ ರಂಗದಲ್ಲಿ ಎಲ್ಲಾ ಪಕ್ಷಗಳು ಎದುರಿಸುವ ವಿಚಾರ ಇದು. ಅವರು ಇಲ್ಲಿಗೆ ಬಂದಿರುವಾಗ ಅವರಿಗೆ ನೆರವು ನೀಡುವುದು ನಮ್ಮ ಕರ್ತವ್ಯ. ನಾನು ಹಾಗೂ ನಮ್ಮ ಶಾಸಕರು ಅವರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಅವರದೇ ಶಾಸಕರ ಮೇಲೆ ನಂಬಿಕೆ ಇಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಹಾಗಿದ್ದರೆ ಅವರು ಕರ್ನಾಟಕದಲ್ಲಿ ಆಪರೇಷನ್ ಕಮಲ ಮಾಡಿದ್ದು ಯಾಕೆ? ಎಂದು ಪ್ರಶ್ನಿಸಿದರು.

ಇದು ಹೈಕಮಾಂಡ್ ನಾಯಕರು ಕೊಟ್ಟಿರುವ ಟಾಸ್ಕ್ ಆಗಿದೆಯೇ ಎಂದು ಕೇಳಿದಾಗ, "ಯಾವ ಟಾಸ್ಕ್ ಕೂಡ ಇಲ್ಲ. ರಾಜ್ಯಸಭಾ ಚುನಾವಣೆ ಇರುವ ಕಾರಣಕ್ಕೆ ಆಪರೇಷನ್ ಕಮಲದ‌ ಭೀತಿ ಎದುರಾಗಿದೆ. ನಮ್ಮವರ ಮೇಲೆ ಒತ್ತಡವಿದೆ. ದೊಡ್ಡ, ದೊಡ್ಡ ಆಫರ್ ಗಳನ್ನು ಕೊಡುತ್ತಿದ್ದಾರೆ. 14-15 ಜನ ಎಂಎಲ್ ಎಗಳು ಇಲ್ಲಿಗೆ ಬಂದಿದ್ದಾರೆ‌. ಒಡಿಸ್ಸಾ ಪಿಸಿಸಿ ಅಧ್ಯಕ್ಷರು ಕರೆ ಮಾಡಿ ಜಾತ್ಯಾತೀತ ಪಕ್ಷಗಳೆಲ್ಲಾ ಒಂದಾಗಿದ್ದೇವೆ.

Dk Shivakumar with odisha mlas
Watch | ಒಡಿಶಾ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌! ನನಗಿದು ಹೊಸತಲ್ಲ- ಡಿ.ಕೆ ಶಿವಕುಮಾರ್

ಆಪರೇಷನ್ ಕಮಲ ನಡೆಯುವ ಸಂಭವಿದೆ ಎಂದರು. ಪಕ್ಷದ ಅಧ್ಯಕ್ಷರು ಕರೆ ಮಾಡಿದಾಗ ಗೌರವ ನೀಡುವುದು ನಮ್ಮ ಕರ್ತವ್ಯ. ಬನ್ನಿ ಇಲ್ಲೇ ವಾತಾವರಣ ಚೆನ್ನಾಗಿದೆ ಎಂದು ಹೇಳಿದೆ. ಎಲ್ಲಾ ಶಾಸಕರು ಖುಷಿಯಾಗಿದ್ದಾರೆ. ಹೊಸಬರು ಸಹ ಇದ್ದಾರೆ. ಅವರೇ ಬಂದು ಇಲ್ಲಿ ಉಳಿದುಕೊಂಡಿದ್ದಾರೆ. ನಾವು ಅವರ ಯೋಗಕ್ಷೇಮ ವಿಚಾರಿಸುತ್ತಿದ್ದೇವೆ. ಬಿಜೆಡಿ, ಕಮ್ಯುನಿಸ್ಟ್ ಪಕ್ಷ ಹಾಗೂ ನಾವು ಜಂಟಿಯಾಗಿ ಅಭ್ಯರ್ಥಿ ಕಣಕ್ಕೆ ಇಳಿಸಿದ್ದೇವೆ. ಬಿಜೆಪಿ ಮಾಡುವುದು ಮಾಡುತ್ತದೆ, ನಾವು ಮಾಡೋದು ಮಾಡುತ್ತೇವೆ" ಎಂದರು.

ಟ್ರಬಲ್ ಶೂಟರ್ ಕೆಲಸ ಸಮಾಪ್ತಿಯಾಗಿದೆ ಎಂದಾಗ, "ಮಾಗಡಿ ಬಾಲಕೃಷ್ಣ, ಯೋಗೇಶ್ವರ್ ಇದ್ದಾರೆ. ಅವರ ಅನುಭವ, ಅವರ ಕಸ್ಟಡಿಯಲ್ಲಿ ನಾವಿದ್ದೇವೆ. ಅವರಿಗೂ ಜವಾಬ್ದಾರಿ ಇದೆಯಲ್ಲ. ನಮ್ಮ ಜಿಲ್ಲೆಯ ಎಲ್ಲಾ ಶಾಸಕರಿಗೂ ಜವಾಬ್ದಾರಿಯಿದೆ. ಎಲ್ಲರನ್ನೂ ಕಾಪಾಡಬೇಕಿರುವುದು ನಮ್ಮ ಕರ್ತವ್ಯವಲ್ಲವೇ? ಯಾರೂ ಬರಲ್ಲ ಅದು ಬೇರೆ ವಿಚಾರ. ಯಾರೂ ಬರಲು ಆಗುವುದಿಲ್ಲ, ಮುಟ್ಟಲೂ ಆಗುವುದಿಲ್ಲ, ಮಾತನಾಡುವುದಕ್ಕೂ ಆಗುವುದಿಲ್ಲ. ಅದಕ್ಕೆ ಅವಕಾಶವೂ ಇಲ್ಲ‌" ಎಂದರು.

ಈ‌‌ ಹಿಂದೆಯೂ ಗುಜರಾತ್ ಚುನಾವಣೆ ಹೊತ್ತಿನಲ್ಲೂ ನೀವು ಇದೇ ರೀತಿ ಪಕ್ಷಕ್ಕೆ ನೆರವಾಗಿದ್ದೀರಿ. ನಿಮ್ಮ ಆಸೆ ಈಡೇರಲಿದೆಯೇ ಎಂದಾಗ, "ನಾನು ಇದರ ಬಗ್ಗೆ ಮಾತನಾಡುವುದಿಲ್ಲ. ಕಾದು ನೋಡೋಣ" ಎಂದರು.

ಇದರಿಂದ ನಿಮ್ಮ ಮುಂದಿನ ಹೆಜ್ಜೆ ನಿಮ್ಮ ಕನಸಿನ ಹತ್ತಿರ ಇರುತ್ತದೆಯೇ ಎಂದಾಗ, "ನಾನೇಕೆ ಕನಸು ಕಾಣಲಿ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ" ಎಂದರು. ಯಾವಾಗ ವಾಪಸ್ ಕರೆದುಕೊಂಡು ಹೋಗುವುದು ಎಂದಾಹ, "ಅದನ್ನ ನಾವು ತೀರ್ಮಾನ ಮಾಡುತ್ತೇವೆ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com