

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಯುವಘಟಕದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಅವರ ಸ್ಥಾನದಿಂದ ತೆಗೆದುಹಾಕಿತ್ತು. ಇದೇ ವಿಷಯಕ್ಕೆ ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವೆ ವಾಗ್ವಾದ ನಡೆದಿದ್ದು, ತೀವ್ರ ಸ್ವರೂಪ ಪಡೆದುಕೊಂಡ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.
Advertisement