ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಹಿಂದೂ ವಿರೋಧಿ ಸಿಎಂಗಳು ಒಂದೇ ತಿಂಗಳಲ್ಲಿ ಅಧಿಕಾರ ಕಳೆದುಕೊಂಡ್ರು: ಛಲವಾದಿ ವ್ಯಂಗ್ಯ

ಹಿಂದುತ್ವವನ್ನು ವಿರೋಧಿಸುತ್ತಿದ್ದ ನಾಲ್ವರು ಮುಖ್ಯಮಂತ್ರಿಗಳು ಒಂದೇ ತಿಂಗಳಲ್ಲಿ ಅಧಿಕಾರ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
Siddaramaiah, Chalavadi Narayanaswamy
ಸಿದ್ದರಾಮಯ್ಯ, ಛಲವಾದಿ ನಾರಾಯಣಸ್ವಾಮಿ
Updated on

ಬೆಂಗಳೂರು: ಹಿಂದುತ್ವವನ್ನು ವಿರೋಧಿಸುತ್ತಿದ್ದ ನಾಲ್ವರು ಮುಖ್ಯಮಂತ್ರಿಗಳು ಒಂದೇ ತಿಂಗಳಲ್ಲಿ ಅಧಿಕಾರ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿಗಳು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆ ಜಾಗಕ್ಕೆ ಡಿಕೆ ಶಿವಕುಮಾರ್ ಬರುತ್ತಿದ್ದಾರೆ. ಇಲ್ಲಿ ವ್ಯಕ್ತಿ ಬದಲಾಗಿದ್ದಾರೆ. ಆದರೆ ವ್ಯವಸ್ಥೆ ಬದಲಾಗಲ್ಲ ಎಂದರು.

ಕಳೆದ ಪಂಚ ರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಡಿಎಂಕೆ ಪಕ್ಷದ ಮುಖ್ಯಸ್ಥ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಪತನಗೊಂಡಿತ್ತು. ಇನ್ನು ಮಮತಾ ಬ್ಯಾನರ್ಜಿ ಹಾಗೂ ಎಂಕೆ ಸ್ಟಾಲಿನ್ ಹೀನಾಯವಾಗಿ ಸೋಲು ಕಂಡಿದ್ದರು.

Siddaramaiah, Chalavadi Narayanaswamy
ಸಿದ್ದರಾಮಯ್ಯ ರಾಜಿನಾಮೆಯಿಂದ ಜನತೆಗೇನೂ ಆಗ್ಬೇಕಿಲ್ಲ.., ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಆಗ್ಬಿಟ್ಟಿದೆ: Lahar Singh Siroya

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com