'ದೇವರು ಅವಕಾಶ ಮಾತ್ರ ಕೊಡುತ್ತಾನೆ, ಅದರಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದಕ್ಕೆ ಅತ್ಯುತ್ತಮ ಉದಾಹರಣೆ ನಮ್ಮ ಸಿದ್ದರಾಮಯ್ಯನವರು': ಡಿ.ಕೆ ಶಿವಕುಮಾರ್

ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಒಡನಾಟ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೆಳೆಸುವಲ್ಲಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಡಿ.ಕೆ ಶಿವಕುಮಾರ್ ಮೆಲುಕು ಹಾಕಿದ್ದಾರೆ.
D K Shivakumar and Aiddaramaiah
ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ
Updated on

ಬೆಂಗಳೂರು: ಸಿಎಂ ಪಟ್ಟದಿಂದ ನಿರ್ಗಮಿಸಿದ, ಈ ರಾಜ್ಯ ಕಂಡ ಅತಿ ದೀರ್ಘಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರಶಂಸೆಯ ನುಡಿಗಳನ್ನು ಭಾವೀ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಒಡನಾಟ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೆಳೆಸುವಲ್ಲಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಡಿ ಕೆ ಶಿವಕುಮಾರ್ ಮೆಲುಕು ಹಾಕಿದ್ದಾರೆ. ಭಾರತ ರಾಜಕಾರಣದ ಧೀಮಂತ ನಾಯಕ ಎಂದು ಹೊಗಳಿದ್ದಾರೆ.

D K Shivakumar and Aiddaramaiah
Karnataka CM News LIVE Updates | ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ತೀವ್ರ ಲಾಬಿ: ದೆಹಲಿಯಲ್ಲಿ ಬೀಡುಬಿಟ್ಟ ಹಲವು ಶಾಸಕರು!

ಡಿ ಕೆ ಶಿವಕುಮಾರ್ ಅವರು ಭಾನುವಾರ ಅಥವಾ ಸೋಮವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಸಂಪುಟದಲ್ಲಿ ಯಾವ ನಾಯಕರಿಗೆ ಯಾವ ಖಾತೆಗಳು ಹಂಚಿಕೆಯಾಗಲಿವೆ ಎಂಬ ಕುತೂಹಲವಿದೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಡಿಸಿಎಂ ಹುದ್ದೆ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com