

ಕೊಪ್ಪಳ: ಕರ್ನಾಟಕದಲ್ಲಿ ಆಡಳಿತ ಮತ್ತು ಅಭಿವೃದ್ಧಿಯ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರಿಸಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನತ್ತ ಹೆಚ್ಚಿನ ಗಮನ ಹರಿಸುತ್ತಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಗಂಗಾವತಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಶಿವಕುಮಾರ್ಗೆ ಬೆಂಗಳೂರೇ ಇಡೀ ಕರ್ನಾಟಕ” ಎಂದು ಟೀಕಿಸುವ ಮೂಲಕ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದಿದೆ. ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷ ಉಪಮುಖ್ಯಮಂತ್ರಿಯಾಗಿ ಹಾಗೂ ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆದರೆ, ಉತ್ತರ ಕರ್ನಾಟಕದ ಯಾದಗಿರಿ, ಗದಗದಂತಹ ಜಿಲ್ಲೆಗಳ ಬಗ್ಗೆಯೂ ಅವರಿಗೆ ಸರಿಯಾಗಿ ತಿಳಿದಿಲ್ಲವೆಂಬಂತೆ ಕಾಣುತ್ತಿದೆ. ರೈತರ ಸಂಕಷ್ಟವನ್ನು ಪರಿಹರಿಸಲು ಸರ್ಕಾರಕ್ಕೆ ಒಂದೇ ಒಂದು ಯೋಜನೆಯನ್ನೂ ಜಾರಿಗೆ ತರಲು ಸಾಧ್ಯವಾಗಿಲ್ಲ. ಬರಗಾಲದ ಸಂದರ್ಭದಲ್ಲಿ ರೈತರು ಬದುಕಿದ್ದಾರೆಯೇ, ಸತ್ತಿದ್ದಾರೆಯೇ ಎಂದು ವಿಚಾರಿಸಲು ಒಬ್ಬ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡಲಿಲ್ಲ ಎಂದು ಕಿಡಿಕಾರಿದರು.