ಒಂದೇ ವೇದಿಕೆಯಲ್ಲಿ ರಾಜಕೀಯ ಬದ್ದ ವೈರಿಗಳು: ನಂದಿ ಮೆಡಿಕಲ್ ಕಾಲೇಜು ಓಪಿಡಿ ಬ್ಲಾಕ್‌ಗೆ 'ನನ್ನ ಅಣ್ಣ ಸುಧಾಕರ್ ತಾಯಿ ಹೆಸರಿಡಿ'; ಪ್ರದೀಪ್ ಈಶ್ವರ್

ಸುಧಾಕರ್‌ ಅವರ ತಾಯಿ ಶಾಂತಮ್ಮನವರು ನನಗೂ ತಾಯಿಯಿದ್ದಂತೆ, ಅವರ ಹೆಸರು ಇಡಬೇಕು. ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಿ ಅನುಮತಿ ಕೊಡಿಸಿ ಎಂದು ಮನವಿ ಮಾಡಿದರು.
k Sudhakar And pradeep Eshwar
ಸುಧಾಕರ್ ಮತ್ತು ಪ್ರದೀಪ್ ಈಶ್ವರ್
Updated on

ಚಿಕ್ಕಬಳ್ಳಾಪುರ: ನಂದಿ ಮೆಡಿಕಲ್ ಕಾಲೇಜಿನ ಓಪಿಡಿ ಬ್ಲಾಕ್‌ಗೆ ಸಂಸದ ಡಾ.ಕೆ ಸುಧಾಕರ್ ತಾಯಿಯವರ ಹೆಸರಿಡಿ ಎಂದು ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ನಡೆದ ವಿಶೇಷಚೇತನ ಹಾಗೂ ಹಿರಿಯ ನಾಗರೀಕರಿಕರಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಧಾಕರ್‌ ಅವರ ತಾಯಿ ಶಾಂತಮ್ಮನವರು ನನಗೂ ತಾಯಿಯಿದ್ದಂತೆ, ಅವರ ಹೆಸರು ಇಡಬೇಕು. ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಿ ಅನುಮತಿ ಕೊಡಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಭೈರತಿ ಸುರೇಶ್ ಹಾಗೂ ಸುಧಾಕರ್‌ ಎದುರಲ್ಲೇ ಪ್ರದೀಪ್‌ ಈಶ್ವರ್‌ ಈ ಮಾತುಗಳನ್ನಾಡಿದರು. ಚಿಕ್ಕಬಳ್ಳಾಪುರ ತಾಲೂಕು ಅರೂರು ಬಳಿ ಇರುವ ನಂದಿ ವೈದ್ಯಕೀಯ ಮೆಡಿಕಲ್ ಕಾಲೇಜಿನ ಓಪಿಡಿ ಬ್ಲಾಕ್ ಇಂದು ಉದ್ಘಾಟನೆಗೊಂಡಿದೆ. ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಬಾಗಿಯಾಗಿದ್ದರು.

ರಾಜಕೀಯ ಬದ್ದ ವೈರಿಗಳು ಎಂದು ಕರೆಸಿಕೊಳ್ಳುವ ಪ್ರದೀಪ್ ಈಶ್ವರ್ ಹಾಗೂ ಕೆ ಸುಧಾಕರ್ ಇಂದು ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗಿದ್ದರು. ಈ ಹಿನ್ನೆಲೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿತ್ತು.

k Sudhakar And pradeep Eshwar
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಮಾಜಿ ಸಚಿವ ಸುಧಾಕರ್ ಸಹೋದರನ ಕುಟುಂಬಸ್ಥರ ವಿರುದ್ಧ ಯುವತಿ ದೂರು!

ಈ ವೇಳೆ ಪ್ರಾರಂಭದಲ್ಲಿ ಇಬ್ಬರು ನಾಯಕರು ಭೈರತಿ ಸುರೇಶ್‌ ಅಕ್ಕ ಪಕ್ಕ ಕುಳಿತಿದ್ದರು. ಇನ್ನು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವ ವೇಳೆ ಪ್ರದೀಪ್‌ ಈಶ್ವರ್‌, ಸಂಸದರು ನನ್ನ ಅಣ್ಣ.. ಸುಧಾಕರ್ ಅಣ್ಣ ಎಂದು ಹೇಳುವ ಮೂಲಕ ಗಮನಸೆಳೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com