ರಾಜ್ಯೋತ್ಸವ…ರಾಜ್ಯದೆಲ್ಲೆಡೆ ಸಂಭ್ರಮದ ವಾತಾವರಣ. ‘ಜೈ ಕನ್ನಡಾಂಬೆ’ ಎನ್ನುವ ಘೋಷಣೆ, ಕನ್ನಡದ ಹೋರಾಟಗಾರರ ಭಾಷಣಗಳು, ಕನ್ನಡದ ಹಿರಿಯ ಕವಿಗಳ ಕಟೌಟ್ ಗಳಿಗೆ ಮಾಲಾರ್ಪಣೆ, ಅದ್ದೂರಿ ಆರ್ಕೆಸ್ಟ್ರಾಗಳು, ‘ಕನ್ನಡ ಉಳಿಸಿ, ಬೆಳೆಸಿ’ಎನ್ನುವ ಕೂಗುಗಳು, ಒಂದಷ್ಟು ಯೋಜನೆಗಳು , ಭರವಸೆಗಳು, ರಾಜ್ಯೋತ್ಸವ ಪ್ರಶಸ್ತಿಗಳು..ಹೀಗೆ ನವಂಬರ್ ತಿಂಗಳಿಡೀ ರಾಜ್ಯೋತ್ಸವ ಆಚರಣೆಯಲ್ಲಿ ಕಳೆದು ಹೋಗುತ್ತದೆ. ಮುಂದಿನ ವರ್ಷ ನವಂಬರ್ ತಿಂಗಳು ಬಂದಾಗ ಇದೇ ಆಚರಣೆ ಪುನರಾವತಿ೯ಸುತ್ತದೆ.