social_icon

ಮಂಗಳ ಗ್ರಹದಲ್ಲಿ ಮನೆ ಕಟ್ಟಬೇಕೆ? ಐಐಎಸ್ ಸಿ, ಇಸ್ರೋ ಸಂಶೋಧಕರಿಂದ ಇಟ್ಟಿಗೆಗಳ ಅಭಿವೃದ್ದಿ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಯೋಗದೊಂದಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಸಂಶೋಧಕರು ಮಂಗಳ ಗ್ರಹದಲ್ಲಿ ಕಟ್ಟಡದಂತಹ ರಚನೆಗಳನ್ನು ನಿರ್ಮಿಸಲು ಬಳಸಬಹುದಾದ 'ಬಾಹ್ಯಾಕಾಶ ಇಟ್ಟಿಗೆ'ಗಳನ್ನು ಅಭಿವೃದ್ಧಿಪಡಿಸಿದ್ದಾರೆ.

Published: 21st April 2022 12:47 AM  |   Last Updated: 04th November 2022 12:06 PM   |  A+A-


Bricks_made_out_of_Martian_soil_using_bacteria_and_urea1

ಇಟ್ಟಿಗೆಗಳ ಚಿತ್ರ

The New Indian Express

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಯೋಗದೊಂದಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಸಂಶೋಧಕರು ಮಂಗಳ ಗ್ರಹದಲ್ಲಿ ಕಟ್ಟಡದಂತಹ ರಚನೆಗಳನ್ನು ನಿರ್ಮಿಸಲು ಬಳಸಬಹುದಾದ 'ಬಾಹ್ಯಾಕಾಶ ಇಟ್ಟಿಗೆ'ಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಿಂದ ಕೆಂಪು ಗ್ರಹದಲ್ಲಿ ಮಾನವ ನೆಲೆಸಲು ಅನುಕೂಲವಾಗುತ್ತದೆ.

ಮಂಗಳ ಗ್ರಹದ ಮಣ್ಣು, ಬ್ಯಾಕ್ಟಿರಿಯಾ ಮತ್ತು ಯೂರಿಯಾ ಒಳಗೊಂಡಂತೆ ಸಮರ್ಥನೀಯ ವಿಧಾನದಲ್ಲಿ ಇಟ್ಟಿಗೆ ತಯಾರಿಸಲಾಗಿದೆ. ಪಿಎಲ್ ಒಎಸ್ ಜರ್ನಲ್ ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ಈ ಬಾಹ್ಯಾಕಾಶ ಇಟ್ಟಿಗೆಗಳನ್ನು ತಯಾರಿಸುವ ವಿಧಾನವನ್ನು ವಿವರಿಸಲಾಗಿದೆ ಎಂದು ಐಐಎಸ್ ಸಿ ಹೇಳಿಕೆ ಬಿಡುಗಡೆ ಮಾಡಿದೆ

ಮಂಗಳ ಗ್ರಹದ ಮಣ್ಣು, ಸ್ಪೊರೊಸಾರ್ಸಿನಾ ಪಾಸ್ಟೂರಿ ಎಂದು ಕರೆಯುವ ಬ್ಯಾಕ್ಟಿರಿಯಾ, ಯೂರಿಯಾ ಮತ್ತು ನಿಕಲ್ ಕ್ಲೋರೈಡ್ ನನ್ನು ಬೆರೆಸಿ ಮೊದಲು ಸ್ಲರಿಯನ್ನು ಮಾಡಿಕೊಳ್ಳಬೇಕಾಗುತ್ತದೆ. ಈ ಸ್ಲರಿಯನ್ನು ಯಾವುದೇ ಅಪೇಕ್ಷಿತ ಆಕಾರದ ಅಚ್ಚುಗಳಲ್ಲಿ ಸುರಿಯಬಹುದು ಮತ್ತು ಕೆಲವು ದಿನಗಳಲ್ಲಿ ಬ್ಯಾಕ್ಟೀರಿಯಾ ಯೂರಿಯಾವನ್ನು ಕ್ಯಾಲ್ಸಿಯಂ ಕಾರ್ಬೋನೇಟ್ ಹರಳುಗಳಾಗಿ ಪರಿವರ್ತಿಸುತ್ತದೆ. ಈ ಹರಳುಗಳು ಸೂಕ್ಷ್ಮಜೀವಿಗಳಿಂದ ಸ್ರವಿಸುವ ಬಯೋಪಾಲಿಮರ್‌ಗಳೊಂದಿಗೆ, ಮಣ್ಣಿನ ಕಣಗಳನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಸಿಮೆಂಟ್ ಆಗಿ ಕಾರ್ಯನಿರ್ವಹಿಸುತ್ತವೆ ಎಂದು ಐಐಎಸ್ ಸಿ ಹೇಳಿದೆ. 

ಈ ವಿಧಾನದ ಅನುಕೂಲವೆಂದರೆ ಇದು ಇಟ್ಟಿಗೆ ಸಾಂದ್ರತೆಯನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ರಂಧ್ರಗಳ ಜಾಗದಲ್ಲಿ ಒಳನುಸುಳುವ ಬ್ಯಾಕ್ಟೀರಿಯಾಗಳು ಕಣಗಳನ್ನು ಒಟ್ಟಿಗೆ ಬಂಧಿಸಲು ತಮ್ಮದೇ ಆದ ಪ್ರೋಟೀನ್‌ ಬಳಸುತ್ತವೆ, ಸಾಂದ್ರತೆಯನ್ನು ಕಡಿಮೆ ಮಾಡುತ್ತವೆ ಮತ್ತು ಬಲವಾದ ಇಟ್ಟಿಗೆಗಳಿಗೆ ಕಾರಣವಾಗುತ್ತದೆ ಎಂದು ಐಐಎಸ್ ಸಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಲೋಕ್ ಕುಮಾರ್ ಹೇಳುತ್ತಾರೆ.

ತಂಡವು ಲ್ಯಾಬ್-ಆನ್-ಎ-ಚಿಪ್ ಸಾಧನವನ್ನು ಅಭಿವೃದ್ಧಿಪಡಿಸಿದೆ, ಇದು ಸೂಕ್ಷ್ಮ ಪರಿಸ್ಥಿತಿಗಳಲ್ಲಿ ಬ್ಯಾಕ್ಟೀರಿಯಾದ ಚಟುವಟಿಕೆಯನ್ನು ಅಳೆಯುವ ಗುರಿಯನ್ನು ಹೊಂದಿದೆ. ಭವಿಷ್ಯದಲ್ಲಿ ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸ್ಥಿತಿಗಳಲ್ಲಿ ಪ್ರಯೋಗಗಳನ್ನು ಮಾಡುವ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಸಾಧನವನ್ನು ಅಭಿವೃದ್ಧಿಪಡಿಸಲಾಗುತ್ತಿದೆ" ಎಂದು ಐಐಎಸ್ ಸಿ ಡಿಬಿಟಿ ಬಯೋಕೇರ್ ಫೆಲೋ ಮತ್ತು ಅಧ್ಯಯನದ ಮೊದಲ ಲೇಖಕಿ ರಶ್ಮಿ ದೀಕ್ಷಿತ್ ವಿವರಿಸುತ್ತಾರೆ.


Stay up to date on all the latest ವಿಜ್ಞಾನ-ತಂತ್ರಜ್ಞಾನ news
Poll
Dk shivakumar

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳ ಗಡಿ ದಾಟುವುದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


Result
ಒಪ್ಪುತ್ತೇನೆ
ಒಪ್ಪುವುದಿಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • hemanth

    i can't understand why money gets wasted on meaningless developements
    9 months ago reply
flipboard facebook twitter whatsapp