ನವೆಂಬರ್ 1 ನನಗೆ ಶ್ರಾದ್ಧದ ದಿನ ಎಂದಿದ್ದರು ಗೋವಿಂದ ಪೈ!

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ...
ಎಂ. ಗೋವಿಂದ ಪೈ
ಎಂ. ಗೋವಿಂದ ಪೈ
Updated on

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ ಎಂದು ಬರೆದವರು ಎಂ. ಗೋವಿಂದ ಪೈ. ಅವರು ಕನ್ನಡದ ಹೆಮ್ಮೆಯ ಕವಿಗಳಲ್ಲೊಬ್ಬರು.

ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರವಾದವರು. ಪೈ ಅವರ ತಂದೆ ಮಂಗಳೂರಿನವರು ತಾಯಿ ಮಂಜೇಶ್ವರದವರು. ತಮ್ಮ ಹೆಸರಿನ ಹಿಂದಿದ್ದ 'ಎಂ' ಎಂಬ ಇನಿಷಿಯಲ್ ತೋರುತ್ತಾ 'ಎಂ' ಅಂದರೆ ಮಂಗಳೂರೂ ಹೌದು, ಮಂಜೇಶ್ವರವೂ ಹೌದು ಎನ್ನುತ್ತಿದ್ದರು.

ಮುಂದುವರಿದು-ಕನ್ನಡನಾಡಿನಲ್ಲಿ ಹುಟ್ಟಿದೀನಲ್ಲ? ಕನ್ನಡದಲ್ಲಿ ಪದ್ಯ ಬರೀತೀನಲ್ಲ? ನಾನೇ ಪುಣ್ಯವಂತ ಎಂದು ಹೇಳಿಕೊಂಡು ಖುಷಿಪಡುತ್ತಿದ್ದರು ಗೋವಿಂದ ಪೈ.

1956ರ ನವೆಂಬರ್ 1 ರಂದು ಹರಿದು ಹಂಚಿ ಹೋಗಿದ್ದ ಕನ್ನಡನಾಡು ಒಂದಾಗಲಿದೆ ಎಂಬ ಸುದ್ದಿ ಕೇಳಿದಾಕ್ಷಣ ಪೈ ಸಿಹಿ ಹಂಚಿದ್ದರು. ಆ ಸಂಭ್ರಮದಲ್ಲೇ 'ತಾಯೆ ಬಾರ ಮೊಗವ ತೋರ' ಗೀತೆ ಬರೆದರು. ಆದರೆ, ನ.1ರಂದು ಕರ್ನಾಟಕದ ಏಕೀಕರಣವಾದಾಗ ಅವರಿಗೆ ತುಂಬ ಬೇಸರವಾಗುವಂಥ ಘಟನೆ ನಡೆದುಹೋಯಿತು. ಕರ್ನಾಟಕದ ಕಾಸರಗೋಡು ಕೇರಳಕ್ಕೆ ಸೇರಿ ಹೋಯಿತು. ಜತೆಗೆ ಮಂಜೇಶ್ವರ ಕೂಡ!

ಈ ಸುದ್ದಿ ತಿಳಿದ ಗೋವಿಂದ ಪೈ ಅವರು ಗಳಗಳನೆ ಅತ್ತೇಬಿಟ್ಟರಂತೆ. ನಂತರ ನವೆಂಬರ್ ಒಂದನೇ ತಾರೀಖು ನನ್ನ ಪಾಲಿಗೆ ಶ್ರಾದ್ಧದ ದಿನ. ಏಕೆಂದರೆ, ಅವತ್ತು ನನ್ನ ಕನ್ನಡ ನಾಡಿಗೆ ಅನ್ಯಾಯವಾಗಿದೆ. ಅವಮಾನ ಮಾಡಲಾಗಿದೆ.

ಕನ್ನಡಮ್ಮನ ಮನೆಯ ಒಂದು ಭಾಗವನ್ನೇ ಕತ್ತರಿಸಿ ಬೇರೆಯವರಿಗೆ ಕೊಟ್ಟರೆ ಅದನ್ನು ಸಹಿಸುವುದು ಹೇಗೆ ಎಂದರು. ಮುಂದುವರಿದು- 'ನಾನು ಹುಟ್ಟಿದ್ದು ಕನ್ನಡನಾಡಿಗೆ ಸೇರಿದ್ದ ಮಂಜೇಶ್ವರದಲ್ಲಿ. ಆದರೆ ಈಗ ಮಂಜೇಶ್ವರ ಕೇರಳಕ್ಕೆ ಸೇರಿಹೋಗಿದೆ. ನಾನು ಕನ್ನಡದ ನೆಲದಲ್ಲೇ, ಅಂದರೆ ಮಂಗಳೂರಿನಲ್ಲೇ ಸಾಯಲು ಇಷ್ಟಪಡುತ್ತೇನೆ' ಎಂದರು.

ಮುಂದೆ 1963ರಲ್ಲಿ ಅವರು ಕೊನೆಯುಸಿರೆಳೆದದ್ದು ಮಂಗಳೂರಿನ ಬಂಧುಗಳ ಮನೆಯಲ್ಲೇ!.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com