ಭೀಮಾ ಕೋರೆಗಾಂವ್ ಸಂಗ್ರಾಮದ 200ನೇ ವಿಜಯೋತ್ಸವ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಳಿಕ ಪುಣೆ ಹಾಗೂ ಮುಂಬೈನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮಹಾರಾಷ್ಟ್ರಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ. ದಲಿತಪರ ಸಂಘಟನೆಗಳು ಬುಧವಾರ ಮಹಾರಾಷ್ಟ್ರ ಬಂದ್ ಗೆ ಕರೆ ನೀಡಿದ್ದು, ರಾಜ್ಯಾದ್ಯಂತ ಉದ್ವಿಗ್ನ ಪರಿಸ್ಥಿತಿ ಕಂಡು ಬಂದಿದೆ. ಕೆಲ ಆಯಕಟ್ಟಿನ ಪ್ರದೇಶಗಳಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಸಹ ಕೈಗೊಳ್ಳಲಾಗಿದೆ.