ಅದರಲ್ಲಿಯೂ ವಿವೇಕಾನಂದರು 1893ರ ಸೆಪ್ಟೆಂಬರ್ 11ರಂದು ಸಾವಿರಾರು ಕಿಮೀ ದೂರದ ಅಮೆರಿಕಾದ ಚಿಕಾಗೋದಲ್ಲಿ ಮಾಡಿದ ಐತಿಹಾಸಿಕ ಭಾಷಣ ಭಾರತದ ಇತಿಹಾಸದ ಪುಟಗಳಲ್ಲಿನ ಮರೆಯಲಾಗದ ಕ್ಷಣ. ಇದು ಕೇವಲ ವಿವೇಕಾನಂದರ ವಿಜಯ ಯಾತ್ರೆಯಲ್ಲ, ಭಾರತದ, ಹಿಂದೂ ಧರ್ಮದ ಸಾಹಸ ಯಾತ್ರೆಯೇ ಆಗಿತ್ತು. ವಿಭಿನ್ನ ಜಾತಿ, ಮತಗಳ ಮಾನವ ಸಂಕುಲವನ್ನು ಒಂದೇ ಗೂಡಿನಲ್ಲಿ ಪೋಷಿಸುತ್ತಿರುವ ಭಾರತವನ್ನು ಪ್ರತಿನಿಧಿಸಿ ವಿವೇಕಾನಂದರು ಮಾಡಿದ ಭಾಷಣ ಭಾರತೀಯರಲ್ಲಿ ಸ್ವಾಭಿಮಾನ, ಅವರಲ್ಲಿನ ಧರ್ಮಜಾಗೃತಿಯನ್ನು ಬಡಿದೆಬ್ಬಿಸುವಂತಹುದಾಗಿತ್ತು.