ಕನ್ನಡದ ಪ್ರಮುಖ ಸಾಹಿತಿ, ಪತ್ರಿಕೋದ್ಯಮಿ, ಹೋರಾಟಗಾರರಾಗಿ ಪುಟ್ಟಪ್ಪನವರ ಸಾಧನೆಗೆ ಮನ್ನಣೆಯಾಗಿ ಅನೇಕ ಗೌರವ, ಪ್ರಶಸ್ತಿಗಳು ಲಭಿಸಿದೆ. ಅವುಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವ, ರಾಜ್ಯಸಭಾ ಸದಸ್ಯತ್ವ, 2003ರಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಬಸವಶ್ರೀ ಪ್ರಶಸ್ತಿ, ಟಿ.ಎಸ್.ಆರ್. ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ , ನೃಪತುಂಗ ಪ್ರಶಸ್ತಿಗಳು ಪ್ರಮುಖವಾಗಿದೆ. ಇದಲ್ಲದೆ ಪಾಪು ಅಭಿಮಾನಿಗಳೂ ಸಮರ್ಪಿಸಿದ ಗೌರವಗ್ರಂಥ ‘ಪ್ರಪಂಚದ ಪಾಪು’ ಮತ್ತು ‘ನಾನು ಪಾಟೀಲ ಪುಟ್ಟಪ್ಪ.’ ಸಹ ಅವರ ಜೀವನ ಸಾಧನೆಗೆ ಹಿಡಿದ ಕನ್ನಡಿ.