ಪಂಡಿತ್ ವರದರಾಜ ಅಯ್ಯಂಗಾರ್ ಈ ಪತ್ರಿಕೆಯನ್ನು ಪ್ರಾರಂಭಿಸಿದ್ದರು.ಸಂಸ್ಕೃತ ವಿದ್ವಾಂಸರೂ ಆಗಿರುವ ಇವರು 1945ರಲ್ಲಿ ಈ ಮುದ್ರಣಾಲಯ ಪ್ರಾರಂಭಿಸಿದ್ದು ಇಲ್ಲಿ ಪುಸ್ತಕಗಳು, ಸರ್ಕಾರಿ ಗೆಜೆಟ್ ಗಳು, ಸಂಸ್ಕೃತ ಮತ್ತು ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಗಳು ಸಹ ಮುದ್ರಿತವಾಗಿದ್ದವು. 1963 ರಲ್ಲಿ ಅವರು ಬಾಲಕಿಯರ ಶಾಲೆ ಪ್ರಾರಂಭಿಸಿದರು ಮತ್ತು ಬಾಲಕಿಯರ ಶಿಕ್ಷಣದ ಬಗ್ಗೆ ಒತ್ತು ನೀಡಿದರು. ಅಲ್ಲಿ ಅವರು ಸಂಸ್ಕೃತ ಕಾರ್ಯಾಗಾರಗಳನ್ನು ಆಯೋಜಿಸಿದರು. 1970 ರಲ್ಲಿ, ಸಂಸ್ಕೃತ ಭಾಷೆಯನ್ನು ಜನಪ್ರಿಯಗೊಳಿಸುವುದಕ್ಕಾಗಿ ಪ್ರತಿನಿತ್ಯ ಸಂಸ್ಕೃತ ಜನರಿಗೆ ತಲುಪುವಂತೆ ಮಾಡುವುದಕ್ಕಾಗಿ "ಸುಧರ್ಮ" ಪತ್ರಿಕೆ ಪ್ರಾರಂಭಿಸಿದರು.ಪ್ರಾರಂಭದಲ್ಲಿ ದಿನಕ್ಕೆ 1,000 ಪ್ರತಿಗಳು ಮುದ್ರಣವಾಗುತ್ತಿತ್ತು. ಈಗ 3,500 ಕ್ಕೂ ಮೀರಿ ಮುದ್ರಣ ಕಾಣುತ್ತಿದೆ.