ಕನ್ನಡ ರಾಜ್ಯೋತ್ಸವವನ್ನು ಇಲ್ಲಿ 44 ದಿನಗಳ ಕಾಲ ಆಚರಿಸಲಾಗುತ್ತದೆ, ಆ ಸಮಯದಲ್ಲಿ ಕನ್ನಡ ಧ್ವಜಾರೋಹಣ ಮಾಡಲಾಗುತ್ತದೆ. ಜತೆಗೆ ಭಕ್ತರು ಕನ್ನಡಾಂಬೆ (ತಾಯಿ ಭುವನೇಶ್ವರಿ)ಗೆ ಗೌರವ ಸಮರ್ಪಿಸುತ್ತಾರೆ. ಸಂಜೆ ಸಮಯದಲ್ಲಿ ಮಠದ ಆವರಣದಲ್ಲಿ ವಿವಿಧ ಸಾಹಿತ್ಯಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. . ಅಂತಿಮ ದಿನ, ಕನ್ನಡ ಮಾಧ್ಯಮ ಎಸ್ಎಸ್ಎಲ್ಸಿ ಮತ್ತು ಪಿ.ಯು.ಸಿ.ಗಳಲ್ಲಿ ಉನ್ನತ ಸ್ಥಾನ ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ.