social_icon

ಕಲ್ಲಂಗಡಿ ಹಣ್ಣಿನಿಂದ ಬೆಲ್ಲ ತಯಾರಿಸಿದ ಶಿವಮೊಗ್ಗ ಜಿಲ್ಲೆಯ ರೈತ: ಇದು ಕೊರೋನಾ ಕಲಿಸಿದ ಪಾಠ!

ಕೊರೋನಾ ಸಂಕಷ್ಟದ ಈ ಸಮಯದಲ್ಲಿ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ, ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ಹಲವರು ಹಣ್ಣು-ತರಕಾರಿ, ಹೂವುಗಳನ್ನು ರಸ್ತೆಯಲ್ಲಿ, ಹೊಂಡಕ್ಕೆ ಚೆಲ್ಲಿದ ಘಟನೆಗಳು ಹಲವು ಜಿಲ್ಲೆಗಳಲ್ಲಿ ನಡೆದಿದೆ.

Published: 31st May 2021 10:32 AM  |   Last Updated: 31st May 2021 12:55 PM   |  A+A-


ಜಯರಾಮ್ ಶೆಟ್ಟಿ ಅವರು ಕಲ್ಲಂಗಡಿ ಹಣ್ಣಿನಿಂದ ತಯಾರಿಸಿದ ಬೆಲ್ಲದ ಪಾಕ

Posted By : sumana
Source : The New Indian Express

ಶಿವಮೊಗ್ಗ: ಕೊರೋನಾ ಸಂಕಷ್ಟದ ಈ ಸಮಯದಲ್ಲಿ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ, ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ಹಲವರು ಹಣ್ಣು-ತರಕಾರಿ, ಹೂವುಗಳನ್ನು ರಸ್ತೆಯಲ್ಲಿ, ಹೊಂಡಕ್ಕೆ ಚೆಲ್ಲಿದ ಘಟನೆಗಳು ಹಲವು ಜಿಲ್ಲೆಗಳಲ್ಲಿ ನಡೆದಿದೆ.

ಆದರೆ ಶಿವಮೊಗ್ಗ ಜಿಲ್ಲೆಯ ಹೊಟೇಲ್ ಉದ್ಯಮಿ ಹಾಗೂ ಕೃಷಿಕ ಕೊರೋನಾ ಸಂಕಷ್ಟದಲ್ಲಿ ಸೃಜನಶೀಲತೆ ತೋರಿಸಿದ್ದಾರೆ, ಹೇಗೆ ಅಂತೀರಾ ಅವರ ಸಾಧನೆ ಕೇಳಿ:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ನಿಟ್ಟೂರಿನ ಜಯರಾಮ್ ಶೆಟ್ಟಿ ತಮ್ಮ ಎಂಟು ಎಕರೆ ಜಮೀನಿನಲ್ಲಿ ಕಲ್ಲಂಗಡಿ ಬೆಳೆದಿದ್ದರು. ಕಲ್ಲಂಗಡಿ ಹಣ್ಣು ಜಮೀನಿನಲ್ಲಿ ಬೆಳೆದಿದೆ, ಕೊಳ್ಳುವವರಿಲ್ಲ ಏನು ಮಾಡುವುದಪ್ಪಾ, ಬೆಳೆದ ಬೆಳೆಯೆಲ್ಲವೂ ನಷ್ಟವಾಯಿತಲ್ಲಾ ಎಂದು ಕೈಚೆಲ್ಲಿ ಕುಳಿತುಕೊಳ್ಳದೆ ಅದರಿಂದ ಬೆಲ್ಲ ತಯಾರಿಸಿದ್ದಾರೆ. ಕಬ್ಬಿನಿಂದ ಹೇಗೆ ಸಾಂಪ್ರದಾಯಿಕವಾಗಿ ಬೆಲ್ಲ ತೆಗೆಯುತ್ತಾರೆಯೋ ಅದೇ ರೀತಿ ಇಲ್ಲಿ ಕಲ್ಲಂಗಡಿ ಹಣ್ಣಿನಿಂದಲೂ ಜಯರಾಮ್ ಶೆಟ್ಟಿ ಬೆಲ್ಲ ತಯಾರಿಸಿದ್ದಾರೆ.

42 ವರ್ಷದ ಜಯರಾಮ್ ಶೆಟ್ಟಿ ಮುಂಬೈಯಲ್ಲಿ ಕಳೆದ 30 ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಕಳೆದ ವರ್ಷ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮೂರಿಗೆ ಹಿಂತಿರುಗಿದರು. ಜಮೀನಿನಲ್ಲಿ ಬೆಳೆ ಬೆಳೆಯಲು ಆರಂಭಿಸಿದರು. ಈಗ ನಿಟ್ಟೂರಿನಲ್ಲಿ ಹೊಟೇಲೊಂದನ್ನು ನಡೆಸುತ್ತಿದ್ದಾರೆ.

Jayaram Shetty
ಜಯರಾಮ್ ಶೆಟ್ಟಿ 

ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಮಾತನಾಡಿದ ಅವರು, ನಾಲ್ಕು ಎಕರೆ ಜಮೀನಿನಲ್ಲಿ ಕಲ್ಲಂಗಡಿ ಹಣ್ಣು ಬೆಳೆದೆವು. ಆದರೆ ಕೊರೋನಾ ಲಾಕ್ ಡೌನ್ ನಿರ್ಬಂಧದಿಂದಾಗಿ ಮಾರಾಟ ಮಾಡಲು ಸಾಧ್ಯವಾಗಲಿಲ್ಲ. ಕೊನೆಗೆ ಕೆಲವು ಕೇರಳದ ವ್ಯಾಪಾರಿಗಳು ಒಂದಷ್ಟು ಕಲ್ಲಂಗಡಿಯನ್ನು ಕೆಜಿಗೆ 4 ರೂಪಾಯಿ ಕೊಟ್ಟು ಖರೀದಿಸಿದರು, ಅದರಿಂದ ನಮಗೆ ಅಸಲು ಹಣ ಕೂಡ ಸಿಗಲಿಲ್ಲ. ಆಗ ನಾವು ಮತ್ತು ನಮ್ಮ ಹೊಟೇಲ್ ನ ಸಿಬ್ಬಂದಿ ಸೇರಿ ಬೆಲ್ಲ ತಯಾರಿಸುವ ಕುರಿತು ಯೋಚಿಸಿದೆವು. ತಯಾರಿಸಿಬಿಟ್ಟು ಕೆಲವು ತಿನಿಸುಗಳ ಜೊತೆ ಸೇರಿಸಿ ತಿಂದಾಗ ಒಳ್ಳೆ ರುಚಿ ಬಂತು. ಈ ವರ್ಷ ನಾಲ್ಕು ಎಕರೆಯಲ್ಲಿ ಕಲ್ಲಂಗಡಿ ಬೆಳೆದು ಮತ್ತೆ 4 ಎಕರೆ ನನ್ನ ಸ್ನೇಹಿತನ ಜಮೀನಿನಲ್ಲಿ ಬೆಳೆದಿದ್ದೇವೆ. ವ್ಯಾಪಾರಿಗಳಲ್ಲಿ ಕೇಳಿದರೆ ಕೆಜಿಗೆ 1 ರೂಪಾಯಿ ಹೇಳುತ್ತಾರೆ, ಹಾಗಾಗಿ ಈ ವರ್ಷ ಕೂಡ ಬೆಲ್ಲ ತಯಾರಿಸಲು ತೀರ್ಮಾನಿಸಿದೆವು ಎಂದರು.

ಕಲ್ಲಂಗಡಿ ಹಣ್ಣಿನಿಂದ ಜ್ಯೂಸ್ ತೆಗೆದು ಅದನ್ನು ಎರಡು ಬಾರಿ ಫಿಲ್ಟರ್ ಮಾಡಲಾಗುತ್ತದೆ. ನಂತರ ಜ್ಯೂಸ್ ನ್ನು 4 ಗಂಟೆಗಳ ಕಾಲ ಕುದಿಸಿ ಅದು ದಪ್ಪ ಆಗುವವರೆಗೆ ಕುದಿಸುತ್ತೇವೆ. ಸುಮಾರು 75 ಕೆಜಿ ಬೆಲ್ಲವನ್ನು ಒಂದು ಟನ್ ಕಲ್ಲಂಗಡಿಯಿಂದ ತೆಗೆಯಬಹುದು ಎನ್ನುತ್ತಾರೆ ಜಯರಾಮ್ ಶೆಟ್ಟಿ.

ನನ್ನ ಬಳಿ ಈಗ 250 ಕೆಜಿ ಬೆಲ್ಲದ ದಾಸ್ತಾನು ಇದೆ. ಆದರೆ ಅದು ಎಷ್ಟು ಸಮಯ ಉಳಿಯಬಹುದು ಎಂಬ ಬಗ್ಗೆ ಖಾತ್ರಿಯಿಲ್ಲ, ಇದು ಐದು ದಿನಗಳ ನಂತರವೂ ಉತ್ತಮ ರುಚಿಯನ್ನು ಹೊಂದಿರುತ್ತದೆ. ಇದನ್ನು ಹೆಚ್ಚು ಸಮಯ ಇರಿಸಿಕೊಳ್ಳಲು ಬಯಸಿದರೆ, ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಬಹುದು ಎನ್ನುತ್ತಾರೆ.

ಕಲ್ಲಂಗಡಿಯಿಂದ ಬೆಲ್ಲ ತಯಾರಿಸಿದ ತಮ್ಮ ಪ್ರಕ್ರಿಯೆ ಬಗ್ಗೆ ಸರ್ಕಾರ ಸಂಶೋಧನೆ ನಡೆಸಿ ವಾಣಿಜ್ಯೀಕರಣವಾಗಿ ಯಶಸ್ವಿಗೊಳಿಸಬೇಕು, ಇದರಿಂದ ರೈತರಿಗೆ ಅನುಕೂಲವಾಗಬಹುದು ಎಂದು ಜಯರಾಮ್ ಶೆಟ್ಟಿ ಹೇಳುತ್ತಾರೆ. 


Stay up to date on all the latest ವಿಶೇಷ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp