social_icon

ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬಗೆ ಪದ್ಮಶ್ರೀ, ಪ್ರಶಸ್ತಿ ಗೌರವ ಹೆಚ್ಚಿಸಿದ ಅಕ್ಷರ ಸಂತ

ರಾಜ್ಯದಾದ್ಯಂತ ಅಕ್ಷರ ಸಂತ ಎಂದೇ ಹೆಸರಾಗಿರುವ ಹರೇಕಳ ಹಾಜಬ್ಬ ಅವರಿಗೆ ನವೆಂಬರ್ 8, 2021 ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Published: 09th November 2021 07:45 PM  |   Last Updated: 09th November 2021 07:45 PM   |  A+A-


hajabba

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುತ್ತಿರುವ ಹಾಜಬ್ಬ

Posted By : Lingaraj Badiger
Source : The New Indian Express

ರಾಜ್ಯದಾದ್ಯಂತ ಅಕ್ಷರ ಸಂತ ಎಂದೇ ಹೆಸರಾಗಿರುವ ಹರೇಕಳ ಹಾಜಬ್ಬ ಅವರಿಗೆ ನವೆಂಬರ್ 8, 2021 ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಒಬ್ಬ ಸಾಮಾನ್ಯ ಬಡ ವ್ಯಕ್ತಿ ಹಾಜಬ್ಬ ಅವರು ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟುವ ಮೂಲಕ ಅಸಾಮಾನ್ಯ ಸಾಧನೆ ಮಾಡಿದ್ದಾರೆ.

ಹರಕೇಳ ಹಾಜಬ್ಬ ಅವರಿಗೆ ಜನವರಿ 25, 2020 ರಂದೇ ದೇಶದ ನಾಲ್ಕನೇ ಉನ್ನತ ನಾಗರಿಕ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಆದರೆ ಸಾಂಕ್ರಾಮಿಕ ರೋಗದಿಂದಾಗಿ ಪ್ರಶಸ್ತಿಯನ್ನು ವಿಳಂಬವಾಗಿ ಪ್ರದಾನ ಮಾಡಲಾಗಿದೆ.

ಇದನ್ನು ಓದಿ: ಚಂದ್ರಶೇಖರ ಕಂಬಾರ, ಡಾ. ಬಿ.ಎಂ.ಹೆಗ್ಡೆಗೆ ಪದ್ಮ ಭೂಷಣ, ಹಾಜಬ್ಬ, ವಿಜಯ್​ ಸಂಕೇಶ್ವರ್​ಗೆ ಪದ್ಮಶ್ರೀ ಪ್ರಶಸ್ತಿ​

ಹಾಜಬ್ಬ ಅವರು ತಾವು ಕಿತ್ತಳೆ ಹಣ್ಣು ಮಾರಿ ಉಳಿಸಿದ ಹಣ ಮತ್ತು ಇತರೆ ವ್ಯಕ್ತಿಗಳು ಹಾಗೂ ರಾಜಕಾರಣಿಗಳು ನೀಡಿದ ದೇಣಿಗೆಯಿಂದ ಮಂಗಳೂರಿನ ಹರೇಕಳ ಎಂಬಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯನ್ನು ನಿರ್ಮಿಸಿದ್ದಾರೆ.

"ನಾನು ವಿದೇಶಿಯರೊಂದಿಗೆ ಇಂಗ್ಲಿಷ್ ನಲ್ಲಿ ಮಾತನಾಡಲು ಸಾಧ್ಯವಾಗದ ಕಾರಣ ತುಂಬಾ ನೊಂದುಕೊಂಡೆ ಮತ್ತು ಹಳ್ಳಿಯಲ್ಲಿ ಶಾಲೆಯನ್ನು ನಿರ್ಮಿಸಲು ನಿರ್ಧರಿಸಿದೆ" ಎಂದು ಪದ್ಮ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಎಎನ್ಐ ತಿಳಿಸಿದ್ದಾರೆ.

"ನನಗೆ ಕನ್ನಡ ಮಾತ್ರ ಗೊತ್ತು, ಇಂಗ್ಲಿಷ್ ಅಥವಾ ಹಿಂದಿ ಗೊತ್ತಿಲ್ಲ. ಹಾಗಾಗಿ ವಿದೇಶಿಯರಿಗೆ ಸಹಾಯ ಮಾಡಲು ಸಾಧ್ಯವಾಗದೆ ನಾನು ಖಿನ್ನತೆಗೆ ಒಳಗಾಗಿದ್ದೆ. ನನ್ನ ಹಳ್ಳಿಯಲ್ಲಿ ಶಾಲೆಯನ್ನು ನಿರ್ಮಿಸುವ ಬಗ್ಗೆ ನನಗೇ ಆಶ್ಚರ್ಯವಾಗುತ್ತಿದೆ" ಎಂದು ಅವರು ಹೇಳಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಾಜಬ್ಬ, ತಮ್ಮ ಹಳ್ಳಿಯಲ್ಲೂ ಕಾಲೇಜು ಕಟ್ಟುವ ಕನಸು ಹೊತ್ತಿರುವ ಈ ವಿನಮ್ರ ವ್ಯಕ್ತಿ, ‘ಪದ್ಮಶ್ರೀ ಪ್ರಶಸ್ತಿ ನನಗೆ ಮಾತ್ರ ಸಂದ ಗೌರವವಲ್ಲ, ನನ್ನ ಶಾಲೆ ಹಾಗೂ ಸಾವಿರಾರು ವ್ಯಕ್ತಿಗಳು ಹಾಗೂ ಸರ್ಕಾರಕ್ಕೆ ಸಂದ ಗೌರವ. ನನ್ನ ಶಾಲೆಯ ಮೂಲಸೌಕರ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ನನಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡಿದ ಅಧಿಕಾರಿಗಳು. ಮಕ್ಕಳ ಶಿಕ್ಷಣಕ್ಕಾಗಿ ನನ್ನ ಪ್ರಯತ್ನಗಳು ಮತ್ತು ಕೊಡುಗೆಗಳನ್ನು ಗುರುತಿಸಿದ್ದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.


Stay up to date on all the latest ವಿಶೇಷ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • ಜಯಪ್ರಕಾಶ್

    ಸರ್ಕಾರ ಇ ದಕ್ಕೆ ಹೆಚ್ಚು ಪ್ರಚಾರ ಕೊಡಬೇಕು.
    1 year ago reply
flipboard facebook twitter whatsapp