ಸೌಹಾರ್ದತೆಯ ಸಂದೇಶ: ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ಜೋಡಿ ವಿವಾಹ!

ಸಮಾಜಕ್ಕೆ ಧಾರ್ಮಿಕ ಸೌಹಾರ್ದತೆಯ ಸಂದೇಶ ನೀಡಲು ಮುಸ್ಲಿಂ ಜೋಡಿಯೊಂದು ಭಾನುವಾರ ಹಿಂದೂ ದೇವಾಲಯದ ಆವರಣದಲ್ಲಿ ಸತಿ ಪತಿಗಳಾಗಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಮ್‌ಪುರದ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ವಿವಾಹ ಪದ್ಧತಿಯಂತೆ ವಿವಾಹ ನಡೆದಿದೆ.
ಮುಸ್ಲಿಂ ಜೋಡಿ ವಿವಾಹ
ಮುಸ್ಲಿಂ ಜೋಡಿ ವಿವಾಹ
Updated on

ಶಿಮ್ಲಾ: ಸಮಾಜಕ್ಕೆ ಧಾರ್ಮಿಕ ಸೌಹಾರ್ದತೆಯ ಸಂದೇಶ ನೀಡಲು ಮುಸ್ಲಿಂ ಜೋಡಿಯೊಂದು ಭಾನುವಾರ ಹಿಂದೂ ದೇವಾಲಯದ ಆವರಣದಲ್ಲಿ ಸತಿ ಪತಿಗಳಾಗಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಮ್‌ಪುರದ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ವಿವಾಹ ಪದ್ಧತಿಯಂತೆ ವಿವಾಹ ನಡೆದಿದೆ. ವಿಶ್ವ ಹಿಂದೂ ಪರಿಷತ್ತಿನ ಠಾಕೂರ್ ಸತ್ಯನಾರಾಯಣ ದೇವಸ್ಥಾನದ ಆವರಣದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಮುಸ್ಲಿಂ ಮತ್ತು ಹಿಂದೂ ಸಮುದಾಯದ ಜನರು ಒಗ್ಗೂಡಿ ಸಾಕ್ಷಿಯಾದರು.

ಮೌಲ್ವಿ, ಸಾಕ್ಷಿಗಳು ಹಾಗೂ ವಕೀಲರ ಸಮ್ಮುಖದಲ್ಲಿ ದೇವಸ್ಥಾನದ ಆವರಣದಲ್ಲಿ ನಿಕಾಹ್ ಕಾರ್ಯಕ್ರಮ ನೆರವೇರಿತು. ಧಾರ್ಮಿಕ ಸೌಹಾರ್ದತೆ ಮತ್ತು ಸಹೋದರತ್ವದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಮದುವೆಯನ್ನು ದೇವಸ್ಥಾನದ ಆವರಣದಲ್ಲಿ ಮಾಡಲಾಯಿತು. ಸತ್ಯನಾರಾಯಣ ದೇವಾಲಯ ಸಂಕೀರ್ಣವು ವಿಶ್ವ ಹಿಂದೂ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಛೇರಿಯಾಗಿರುವುದು ಗಮನಾರ್ಹವಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಠಾಕೂರ್ ಸತ್ಯ ನಾರಾಯಣ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ವಿನಯ್ ಶರ್ಮಾ, ವಿಶ್ವ ಹಿಂದೂ ಪರಿಷತ್ ಮತ್ತು ಆರ್‌ಎಸ್‌ಎಸ್ ಆಗಾಗ್ಗೆ ಮುಸ್ಲಿಂ ವಿರೋಧಿ ಎಂದು ಆರೋಪಿಸಲಾಗುತ್ತದೆ. ಆದರೆ ಇಲ್ಲಿ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ದಂಪತಿಗಳು ವಿವಾಹವಾದರು. ಸನಾತನ ಧರ್ಮವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಮೂಲಕ ಮುನ್ನಡೆಯಲು ಪ್ರತಿಯೊಬ್ಬರನ್ನು ಪ್ರೇರೇಪಿಸುತ್ತದೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com